ಮಂಡ್ಯ

ಅಣ್ಣೂರು ಗ್ರಾ.ಪಂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ

annoorಮಂಡ್ಯ: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಏಕಕಾಲದಲ್ಲಿ ಗರಿಷ್ಠ ಸಂಖ್ಯೆಯ ರಂಗೋಲಿಗಳನ್ನು ಬಿಡಿಸಿ ದಾಖಲೆ ನಿರ್ಮಿಸಿದ ಅಣ್ಣೂರು ಗ್ರಾಮ ಪಂಚಾಯತ್ ಸಾಧನೆ `ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಸೇರ್ಪಡೆ ಆಗಿದೆ.

ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಿಸುತ್ತಾ ಗಮನ ಸೆಳೆದಿರುವ ಅಣ್ಣೂರು ಗ್ರಾಮ ಪಂಚಾಯತ್ ಮುಕುಟಕ್ಕೆ ಈ ಮೂಲಕ ಮತ್ತೊಂದು ಗರಿ ಸಿಕ್ಕದಂತಾಗಿದೆ.

ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ 2025ರ ಏ.25ರಂದು ರಂಗೋಲಿ ರಚಿಸುವ ಚಟುವಟಿಕೆಯನ್ನು ಅಣ್ಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 3 ಗ್ರಾಮಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ:-ಮಂಡ್ಯ| ಶಾಸಕ ರವಿಕುಮಾರ್‌ ಗಣಿಗ ವಿರುದ್ಧ ಪ್ರಗತಿಪರ ಸಂಘಟನೆ ಮುಖಂಡರ ಆಕ್ರೋಶ

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಮತ್ತು ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು 1544 ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ 1418 ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.

ಆಂದೋಲನ ಡೆಸ್ಕ್

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

8 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

8 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

18 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

19 hours ago