Another child dies
ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದ 7 ವರ್ಷದ ಸಾನ್ವಿ ಎಂಬುವವಲೇ ಮೃತ ಬಾಲಕಿಯಾಗಿದ್ದಾಳೆ.
ಟೈಲ್ಸ್ ಬಿದ್ದು ಸಾನ್ವಿಯ ಪಾದದ ಮೂಳೆ ಮುರಿದ ಪರಿಣಾಮ ತಂದೆ ನಿಂಗರಾಜು ಅವರು ಕಳೆದ ಮೇ.29ರಂದು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಎಲ್ಲಾ ಪರೀಕ್ಷೆಗಳನ್ನು ನಡೆಸಿದ ನಂತರ ಗುರುವಾರ ರಾತ್ರಿಯೇ ಸಾನ್ವಿಗೆ ಶಸ್ತ್ರಚಿಕಿತ್ಸೆ ಮಾಡಿ, ಅಂದಿನ ರಾತ್ರಿಯೇ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಶುಕ್ರವಾರ ಬೆಳಿಗ್ಗೆ ಬಾಲಕಿ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಶನಿವಾರ ಬೆಳಿಗ್ಗೆ ಡ್ರಿಪ್ ಮೂಲಕ ಔಷಧಿ ಕೂಡ ನೀಡಲಾಗಿತ್ತು. ಔಷಧಿ ನೀಡುತ್ತಿದ್ದಂತೆ ಸಾನ್ವಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ಆದರೆ ಶನಿವಾರ ರಾತ್ರಿ 10:30ರ ಸಮಯದಲ್ಲಿ ಮಗು ಸಾವಿನ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನು ಪೋಷಕರಿಗೆ ಮಾಹಿತಿ ನೀಡುವ ಮುನ್ನವೇ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿ ಕರೆಸಿಕೊಂಡಿದ್ದ ಆರೋಪ ಕೇಳಿಬಂದಿದ್ದು, ಮೆಡಿಕಲ್ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಿದ್ದೇ ಮಗು ಸಾವಿಗೆ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಗು ಸಾವಿನ ಬಗ್ಗೆ ಪ್ರಶ್ನಿಸಿದ ಕುಟುಂಬಸ್ಥರಿಗೆ ವೈದ್ಯರು ಬೇಜಾವಾಬ್ದಾರಿ ಉತ್ತರ ನೀಡಿದ್ದು, ಅಂಗಾಂಗ ವೈಫಲ್ಯದಿಂದ ಮಗು ಸಾವನ್ನಪ್ಪಿದೆ. ಬೇಕಾದರೆ ತನಿಖೆ ಮಾಡಿಸಿಕೊಳ್ಳಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಪೋಷಕರು, ಬೇರೆ ವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ತನಿಖೆಗೆ ಒತ್ತಾಯಿಸಿದ್ದು, ಮಗು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…