ಮಂಡ್ಯ: ವಂಚಕಿ ಐಶ್ವರ್ಯ ಗೌಡ ವಿರುದ್ಧ ಮೇಲಿಂದ ಮೇಲೆ ಎಫ್ಐಆರ್ ದಾಖಲಾಗುತ್ತಲೇ ಇದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಂಚಕಿ ಐಶ್ವರ್ಯ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸಿ ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನ ಅನ್ವಯ ವಂಚಕಿ ಐಶ್ವರ್ಯ ಗೌಡ ವಿರುದ್ಧ ಕೇಸ್ ದಾಖಲಾಗಿದ್ದು, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವವರ ಮೇಲೂ ಪ್ರಕರಣ ದಾಖಲಾಗಿದೆ.
33 ಲಕ್ಷ ನಗದು ಹಾಗೂ ಚಿನ್ನಾಭರಣ ಪಡೆದು ವಂಚನೆ ಮಾಡಿರುವುದಾಗಿ ಕೇಸ್ ದಾಖಲಾಗಿದ್ದು, ಬಗೆದಷ್ಟು ಐಶ್ವರ್ಯ ಗೌಡ ವಂಚನೆ ಬಯಲಾಗುತ್ತಿದೆ.
ಕಳೆದ 2017ರ ಜನವರಿಯಿಂದ ಜೂನ್ ತಿಂಗಳ ಅವಧಿಯಲ್ಲಿ ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಾಳೆ. ಒಟ್ಟು 33 ಲಕ್ಷ ರೂ ನಗದು ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನು ಪಡೆದುಕೊಂಡಿದ್ದಾಳೆ. ಇದು ತನ್ನ ಮೃತ ಗಂಡನ ನಿವೃತ್ತಿಯ ಹಣ ಎಂದು ಭಾಗ್ಯಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…