ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಸೀಟು ಹಿಡಿಯುಲು ಜನರು ಏಕಾಏಕಿ ನುಗ್ಗಿದ್ದಾರೆ. ಇದರಿಂದ ಡೋರ್ ಮುರಿದು ಹೋಗಿದೆ. ನಂತರ ಬಸ್ನಿಂದ ಪ್ರಯಾಣಿಕರನ್ನು ಸಿಬ್ಬಂದಿ ಕೆಳಗಿಳಿಸಿದ್ದಾರೆ. ಕಿತ್ತು ಹೋದ ಡೋರ್ನ್ನು ಟಿಸಿಗೆ ಹಸ್ತಾಂತರಿಸಿದ್ದಾರೆ.
ರಾಜ್ಯದಲ್ಲಿ ಶಕ್ತಿ ಯೋಜನೆ ಘೋಷಣೆ ಆದಾಗಿನಿಂದ ಎಲ್ಲೆಡೆ ಕೆಎಸ್ಆರ್ಟಿಸಿ ಬಸ್ಗಳು ತುಂಬಿ ತುಳುಕುತ್ತಿವೆ. ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಇದರಿಂದ ಎಷ್ಟೋ ಪ್ರಯಾಣಿಕರು ಬಸ್ನಲ್ಲಿ ಜಾಗ ಇಲ್ಲದೇ ಪರದಾಡಿದ್ದಾರೆ.
ಶನಿವಾರ ಕೊಳ್ಳೆಗಾಲದಲ್ಲಿ ಕೆಎಸ್ಆರ್ಟಿಸಿ ಬಸ್ ಒಂದರ ಬಾಗಿಲು ಕಿತ್ತು ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮಳವಳ್ಳಿ ಪಟ್ಟಣದಲ್ಲಿ ಮರುಕಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…