ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಸೀಟು ಹಿಡಿಯುಲು ಜನರು ಏಕಾಏಕಿ ನುಗ್ಗಿದ್ದಾರೆ. ಇದರಿಂದ ಡೋರ್ ಮುರಿದು ಹೋಗಿದೆ. ನಂತರ ಬಸ್ನಿಂದ ಪ್ರಯಾಣಿಕರನ್ನು ಸಿಬ್ಬಂದಿ ಕೆಳಗಿಳಿಸಿದ್ದಾರೆ. ಕಿತ್ತು ಹೋದ ಡೋರ್ನ್ನು ಟಿಸಿಗೆ ಹಸ್ತಾಂತರಿಸಿದ್ದಾರೆ.
ರಾಜ್ಯದಲ್ಲಿ ಶಕ್ತಿ ಯೋಜನೆ ಘೋಷಣೆ ಆದಾಗಿನಿಂದ ಎಲ್ಲೆಡೆ ಕೆಎಸ್ಆರ್ಟಿಸಿ ಬಸ್ಗಳು ತುಂಬಿ ತುಳುಕುತ್ತಿವೆ. ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಇದರಿಂದ ಎಷ್ಟೋ ಪ್ರಯಾಣಿಕರು ಬಸ್ನಲ್ಲಿ ಜಾಗ ಇಲ್ಲದೇ ಪರದಾಡಿದ್ದಾರೆ.
ಶನಿವಾರ ಕೊಳ್ಳೆಗಾಲದಲ್ಲಿ ಕೆಎಸ್ಆರ್ಟಿಸಿ ಬಸ್ ಒಂದರ ಬಾಗಿಲು ಕಿತ್ತು ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮಳವಳ್ಳಿ ಪಟ್ಟಣದಲ್ಲಿ ಮರುಕಳಿಸಿದೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…