ಮಂಡ್ಯ

ನಾರಿ ಶಕ್ತಿಗೆ ಮುರಿದ ಮತ್ತೊಂದು ಕೆಎಸ್‍ಆರ್‌ಟಿಸಿ ಬಸ್ ಡೋರ್

ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಸೀಟು ಹಿಡಿಯುಲು ಜನರು ಏಕಾಏಕಿ ನುಗ್ಗಿದ್ದಾರೆ. ಇದರಿಂದ ಡೋರ್ ಮುರಿದು ಹೋಗಿದೆ. ನಂತರ ಬಸ್‍ನಿಂದ ಪ್ರಯಾಣಿಕರನ್ನು ಸಿಬ್ಬಂದಿ ಕೆಳಗಿಳಿಸಿದ್ದಾರೆ. ಕಿತ್ತು ಹೋದ ಡೋರ್‌ನ್ನು ಟಿಸಿಗೆ ಹಸ್ತಾಂತರಿಸಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆ ಘೋಷಣೆ ಆದಾಗಿನಿಂದ ಎಲ್ಲೆಡೆ ಕೆಎಸ್‍ಆರ್‌ಟಿಸಿ ಬಸ್‍ಗಳು ತುಂಬಿ ತುಳುಕುತ್ತಿವೆ. ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಇದರಿಂದ ಎಷ್ಟೋ ಪ್ರಯಾಣಿಕರು ಬಸ್‍ನಲ್ಲಿ ಜಾಗ ಇಲ್ಲದೇ ಪರದಾಡಿದ್ದಾರೆ.

ಶನಿವಾರ ಕೊಳ್ಳೆಗಾಲದಲ್ಲಿ ಕೆಎಸ್‍ಆರ್‌ಟಿಸಿ ಬಸ್ ಒಂದರ ಬಾಗಿಲು ಕಿತ್ತು ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮಳವಳ್ಳಿ ಪಟ್ಟಣದಲ್ಲಿ ಮರುಕಳಿಸಿದೆ.

lokesh

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

24 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

52 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

6 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

9 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

9 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

10 hours ago