ಮಂಡ್ಯ

ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಆ್ಯಪ್ ಅಭಿವೃದ್ಧಿ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ, ನಿಮ್ಮ ಸಮಸ್ಯೆಗಳನ್ನು ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಇಂದು (ಜು.30) ದುದ್ದ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ “ಸರ್ಕಾರಿ ಕಚೇರಿಗಳಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಬರಲಿದೆ” ಎನ್ನುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದುದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1310 ಕ್ಕೂ ಹೆಚ್ಚು ಮನೆಗಳಿವೆ, ಈಗಾಗಲೇ ಅಧಿಕಾರಿಗಳು ದುದ್ದ ಪಂಚಾಯತಿಯ ಶೇ 90 ರಷ್ಟು ಮನೆಗಳಿಗೆ ತೆರಳಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಆಪ್ ನಲ್ಲಿ ನಮೂದಿಸಿದ್ದಾರೆ ಎಂದು ತಿಳಿಸಿದರು.

ಸಮಸ್ಯೆ ಹೊಂದಿರುವ ಸಾರ್ವಜನಿಕರಲ್ಲಿ ಶೇ 80 ರಷ್ಟು ಜನರು ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಾರೆ, ಶೇ 20 ರಷ್ಟು ಜನರು ಮಾತ್ರ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸುತ್ತಾರೆ, ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಬರಲಿದೆ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಧಿಕಾರಿಗಳಲ್ಲಿ ಅರ್ಜಿ ಕೊಟ್ಟರೆ ಮಾತ್ರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಮನೋಭಾವನೆ ಇದೆ, ಇದನ್ನು ಹೋಗಲಾಡಿಸಲು ಹೊಸ ಆಪ್ ಒಂದನ್ನು ಅಭಿವೃದ್ಧಿ ಪಡಿಸಿದ್ದೇವೆ, ಅಪ್ ನಲ್ಲಿ ಸಮಸ್ಯೆಗಳನ್ನು ತಿಳಿಸಿದರೆ ಸಂಭಂದ ಪಟ್ಟ ಅಧಿಕಾರಿಗಳು ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರೆ ಆ್ಯಪ್ ಬಳಸಿ ತಮ್ಮ ಸಮಸ್ಯೆಗಳನ್ನು ನಮೂದಿಸಬಹುದಾಗಿದೆ ಎಂದರು.

ಅಧಿಕಾರಿಗಳು ರೈತರ ಬಳಿ ಹೋಗಿ ಬೆಳೆ ಪದ್ಧತಿ ಬದಲಾವಣೆಯಿಂದ ಉಂಟಾಗುವ ಆದಾಯ ಹೆಚ್ಚಳ ಕುರಿತು ಮಾಹಿತಿ ನೀಡಬೇಕು, ಹೆಚ್ಚಾಗಿ ಗದ್ದೆಗಳಿಗೆ ಹೋಗಲು ದಾರಿ ಇಲ್ಲವೆಂದು ರೈತರು ತಿಳಿಸಿದ್ದಾರೆ ನಕ್ಷೆಯಲ್ಲಿ ದಾರಿ ಇದ್ದು ಒತ್ತುವರಿ ಮಾಡಿದ್ದಾರೆ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ನಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವೆಂದು ಹೇಳುತ್ತಾರೆ, ನಿಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವಾದರೆ ಆರ್.ಟಿ.ಸಿ ಯಲ್ಲಿರುವ ಸರ್ಕಾರಿ ಜಾಗಗಳನ್ನು ಪರೀಶೀಲನೆ ನಡೆಸಲಾಗುವುದು, ಒಂದು ವೇಳೆ ಯಾರಾದರೂ ಸ್ಮಶಾನ ಒತ್ತುವರಿ ಮಾಡಿದ್ದಾರೆ ಒತ್ತುವರಿಯನ್ನು ತೆರೆವುಗೊಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಮಾತನಾಡಿ ಶಾಸಕರು ಕಳೆದ 6 ಗ್ರಾಮ ಪಂಚಾಯಿತಿಯಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದಾರೆ, ಇದು 7 ಗ್ರಾಮ ಪಂಚಾಯಿತಿ. ಮೊದಲೆಲ್ಲ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿ.ಐ. ಆರ್.ಐ. ಪಿಡಿಒ ಗಳ ಕಚೇರಿಗಳನ್ನು ತಿರುಗಬೇಕಿತ್ತು ಆದರೆ ಈಗ ಆಧಿಕಾರಿಗಳೆ ನಿಮ್ಮ ಮನೆಗಳಿಗೆ ಬಂದು ನಿಮ್ಮ ಸಮಸ್ಯೆ ಆಲಿಸಿ ಪರಿಹಾರ ನೀಡುವ ಕಾರ್ಯಕ್ರಮವಿದು ಸಾರ್ವಜನಿಕರು ಇದನ್ನು ಸದ್ದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ರವರು ಆನ್ ಲೈನ್ ಮೂಲಕ ಪೌತಿ ಖಾತೆ ಮಾಡಿಸಿಕೊಳ್ಳಲು ಅನುವು ಮಾಡಿದ್ದಾರೆ, ಆನ್ಲೈನ್ ಪೌತಿ ಖಾತೆ ಪಡೆಯಲು ಮುಖ್ಯವಾಗಿ ವಂಶವೃಕ್ಷ, ಮರಣ ಪ್ರಮಾಣ ಪತ್ರ ನಿಮ್ಮ ಬಳಿ ಇದ್ದರೆ ಕೇವಲ 15 ದಿನಗಳಲ್ಲಿ ನಿಮಗೆ ಪೌತಿ ಖಾತೆ ದೊರೆಯುತ್ತದೆ. ನಿಮ್ಮ ಜಾಮೀನುಗಳನ್ನು ದುರಸ್ತಿ ಮಾಡುವುದು ಈಗ ಆನ್ ಲೈನ್ ಹಾಗಿದೆ ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ನಂತರ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ ಮಾತನಾಡಿ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಎರಡು ವಾರಗಳು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಜನರು ತಮ್ಮ ಊರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಹಾಗೂ ಅಧಿಕಾರಿಗಳ ಕಚೇರಿಯನ್ನು ಅಲೆದಾಟವನ್ನು ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ನಮ್ಮೇಲ್ಲ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮರ್ಪಕವಾಗಿ ಕೆಲಸಗಳನ್ನು ಮಾಡುತ್ತೇವೆ ಎಂದರು.

ನಂತರ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ರವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಮಂಡ್ಯ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ.ಉದಯ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಲೋಕೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಲಿಂಗೆಗೌಡ ಸೇರಿ ಮತ್ತಿತ್ತರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

12 hours ago

ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…

12 hours ago

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…

14 hours ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…

15 hours ago

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಎಚ್‌ಡಿಕೆ

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…

16 hours ago

ಮಂಡ್ಯ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ…

16 hours ago