ಮಂಡ್ಯ

ಮಂಡ್ಯ: ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯನ್ನು ವಿಸ್ತರಿಸಿದೆ.

ಗ್ರಾಮ ಒನ್’ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಬಹುದು.

ಅರ್ಜಿಯನ್ನು ಸಲ್ಲಿಸುವವರು https://kal-mys.gramaone.karnataka.gov.in/index.php/applicant-registration-initial-step ವೆಬ್ ಸೈಟ್ ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago