ಮಂಡ್ಯ

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆದೇಶ ಪ್ರತಿ ವಿತರಿಸಿದರು.

ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್‌ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಮಾನ್ಯ ಸಚಿವರು ತಿಳಿಸಿದರು.

ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ ಸಲ್ಲಿಸಿದರು.

ನಂತರದಲ್ಲಿ ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪ್ರತ್ಯೇಕ ಪರಿಶೀಲನಾ ಸಮಿತಿಯಿಂದ ಪರಿಶೀಲಿಸಿ, ನಡವಳಿಯಲ್ಲಿ ದಾಖಲಿಸಿ ಅಂತಿಮವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದಿಂದ ಮರುಪರಿಶೀಲನೆಗೆ ಒಳಪಡಿಸಿ ಅರ್ಹ ನೌಕರರ ಅನುಮೋದನೆಯ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಿ, ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಆಕ್ಷೇಪಣೆ ಸಲ್ಲಿಕೆ ಅವಧಿ ಪೂರ್ಣಗೊಂಡ ನಂತರ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಆದೇಶದ ಪ್ರತಿಗಳನ್ನು ವಿತರಿಸಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್.ಅವರು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

1 hour ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

2 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

3 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago