ಮಂಡ್ಯ

ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇ ಸಂಚಿಕೆ

ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇಯ ಸಂಚಿಕೆ ಯಶಸ್ವಿಯಾಗಿ ಜರುಗಿತು.

ನಾಟಕ ನೋಡುವುದಕ್ಕೇ ಜನ ಬರುವುದಿಲ್ಲ ಇನ್ನೂ ನಾಟಕ ಕೃತಿ ಓದಿಕೊಂಡು ಬಂದು ಸಂವಾದ ನಡೆಸುವುದು ಉಂಟೇ ಎಂಬ ಸಂಶಯವನ್ನು ತುಂಬಿದ ಸಭಾಂಗಣ ಹಾಗೂ ಎರಡು ತಾಸಿನ ಚರ್ಚೆ ಸುಳ್ಳು ಮಾಡಿತು. ಬೀದಿ ನಾಟಕದಿಂದ ಶುರುವಾಗಿ ವಾಟ್ಸ್ ಅಪ್ ಯೂನಿವರ್ಸಿಟಿವೆರೆಗೆ ಹಲವು ವಿಷಯಗಳು ಬಂದು ಹೋದವು, ಜೇನ್ ಪಾಲ್ ಸಾರ್ತ್ರೆಯಿಂದ ಕೆ. ವಿ. ಶಂಕರಗೌಡ, ಜಿ. ಮಾದೇಗೌಡರರವೆರೆಗೆ ರಾಜಕೀಯ ಸಿದ್ಧಾಂತ ಹಾಗೂ ಜನಪರ ವ್ಯಕ್ತಿತ್ವ ಹಾಗೂ ನಿಲುವುಗಳ ಕುರಿತೂ ಮಾತುಕತೆಯಾಯಿತು.

ಕಲೆಗಾಗಿ ಕಲೆ, ಕಲಾವಿದ ಯಾವ ಪಂಥಕ್ಕೂ ಸೇರಬಾರದು ಎಂಬ ಸ್ವಲಾಭ ಕೇಂದ್ರೀತ ಚಿಂತನೆಗಳನ್ನು ರಾಷ್ಟ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರಾದರೂ ತಮ್ಮನ್ನು ರಂಗಕರ್ಮಿ ಎಂತಲೇ ಹೆಮ್ಮೆಯಿಂದ ಕರೆದುಕೊಳ್ಳುವ ಬಿ. ಸುರೇಶರವರು ಯಾವ ಮುಲಾಜೂ ಇಲ್ಲದೇ ಧೂಳಿಪಟವಾಗಿಸಿಬಿಟ್ಟರು.

ಸಂವಾದವನ್ನು ಕಳೆದ ಎರಡು ಸಂಚಿಕೆ ಗಳಿಗಿಂತ ಭಿನ್ನವಾಗಿಸಿದ ಬಿ. ಸುರೇಶರಿಗೆ ಕಾರ್ಯಕ್ರಮದ ಯಶಸ್ಸಿಗೆ ದುಡಿದವರಿಗೆ, ಪ್ರಾಯೋಜಕರಿಗೆ, ಸುದ್ದಿ ಮನೆಯ ಮಿತ್ರರಿಗೆ, ಪುಸ್ತಕ ಓದಿ ಸಂವಾದ ನಡೆಸಿದ ಓದುಗರಿಗೆ, ಭಾಗವಹಿಸಿದ ಸಾರ್ವಜನಿಕರಿಗೆ, ದೂರದಿಂದಲೇ ಹರಸಿದ ಎಲ್ಲರಿಗೆ ತುಂಬು ಹೃದಯದ ಧನ್ಯವಾದಗಳು.

(ಇದು ಪ್ರತೀ ತಿಂಗಳ ಮೊದಲ ಭಾನುವಾರ ಮಂಡ್ಯದ ಗಾಂಧಿ ಭವನದಲ್ಲಿ ನಡೆಯುವ ಖಾಯಂ ಕಾರ್ಯಕ್ರಮ. ಆಪ್ತ ಸಂವಾದ ಕಮ್ಯೂನಿಟಿ ಸೇರುವ ಮೂಲಕ ನೀವೂ ಸಹ ತಿಂಗಳಿಗೊಂದು ಪುಸ್ತಕ ಓದಿ ಆ ಪುಸ್ತಕದ ಲೇಖಕರೊಡನೆ ಸಂವಾದ ನಡೆಸಬಹುದು. ಆಸಕ್ತ ವಿದ್ಯಾರ್ಥಿಗಳು ಹಾಗೂ ಓದುಗರಿಗೆ ಪುಸ್ತಕ ಓದಲು ಸ್ಕಾಲರ್ಷಿಪ್ ನೀಡಬಹುದು, ಕಾರ್ಯಕ್ರಮವನ್ನು ಪ್ರಾಯೋಜಿಸಬಹುದು)

 

ಆಂದೋಲನ ಡೆಸ್ಕ್

Recent Posts

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

1 hour ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

3 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

4 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

4 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

4 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

4 hours ago