ಮಂಡ್ಯ

ಜ್ಯೂವೆಲರಿ ಶಾಪ್‌ ದರೋಡೆ ಮಾಡಿದ್ದ ಆರೋಪಿಗಳ ಬಂಧನ : 35.86 ಲಕ್ಷ ಮೌಲ್ಯದ ವಸ್ತುಗಳು ವಶ

ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್‌ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತ ರಿಂದ ನಗದು ಸೇರಿ 35.86 ಲಕ್ಷ ಮೌಲ್ಯದ ಬೆಲೆಬಾಳು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ತಿಳಿಸಿದರು.

ಬಂಧಿತರು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ 154 ಗ್ರಾಂ ಚಿನ್ನ, 20 ಕೆ.ಜಿ ಬೆಳ್ಳಿಯ ಪದಾರ್ಥಗಳು, ಆಶೋಕ ಲೈಲ್ಯಾಂಡ್ ವಾಹನ, ಏರಿಟಿಕಾ ಕಾರು, ಯಮಹಾ ಆರ್ ಎಕ್ಸ್ ಬೈಕ್ ಲ್ಯಾಪ್ ಟಾಪ್, 8 ಹೆಚ್ ಎಫ್ ಇಲಾತಿ ಹಸುಗಳು, ಎಲ್ ಪಿಜಿ ಸಿಲಿಂಡರ್, ಆಕ್ಸಿಜನ್ ಸಿಲಿಂಡರ್,ವಾಟರ್ ಟ್ಯಾಂಕ್, ಗ್ಯಾಸ್ ಕಟರ್ ಮತ್ತು ನಗದು 40 ಸಾವಿರ ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಕೆ ಆರ್ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ, ಹಲಗೂರು, ಮಂಡ್ಯ ಸೆಂಟ್ರಲ್, ಚನ್ನರಾಯಪಟ್ಟಣ ಗ್ರಾಮಾಂತರ, ಚನ್ನಪಟ್ಟಣ ಗ್ರಾಮಾಂತರ, ಮೈಸೂರಿನ ಉದಯಗಿರಿ ಮತ್ತು ಬನ್ನೂರು ಪೊಲೀಸ್ ಠಾಣೆಯ ತಲಾ ಒಂದು ಪ್ರಕರಣಗಳು ಪತ್ತೆಯಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಆಗಸ್ಟ್ ನಲ್ಲಿ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹೊಳಲು- ಆಕ್ಕಿಹೆಬ್ಬಾಳು ಮುಖ್ಯ ರಸ್ತೆಯ ಲೀಲಾ ಬ್ಯಾಂಕರ್ಸ್ ಅಂಡ್ ಜ್ಯುವಲರಿ ಶಾಪ್‌ನಲ್ಲಿ ಕಳ್ಳರು ಅಂಗಡಿಯ ಹಿಂಭಾಗದಲ್ಲಿದ್ದ ವೆಂಟಿಲೇಟರ್ ಸರಳನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಗೋಡೆ ಕೊರೆದು ನುಗ್ಗಿ ಶೋಕೇಸ್‌ನಲ್ಲಿ ವ್ಯಾಪಾರಕ್ಕೆಂದು ಇಟ್ಟಿದ್ದ ಬೆಳ್ಳಿಯ ಪದಾರ್ಥಗಳನ್ನು ಕಳ್ಳತನ ಮಾಡಿದ್ದರು,
ಈ ಬಗ್ಗೆ ಕೆ.ಆರ್.ಪೇಟೆ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಮತ್ತು ಮಾಲು ಪತ್ತೆ ಬಗ್ಗೆ ಪೊಲೀಸರ ತಂಡವನ್ನು ರಚನೆ ಮಾಡಲಾಗಿತ್ತು, ಪೊಲೀಸರ ತಂಡ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ಲಾಸ್‌ನ ಉಮರ್ ನಗರದ ಬಳಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಹೆಚ್ಚಿನ ತನಿಖೆಯ ಸಂಬಂಧ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆರೋಪಿಗಳು 11 ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದರು.
ನಾಗಮಂಗಲ ಆರಕ್ಷಕ ಉಪ ಅಧೀಕ್ಷಕ ಲಕ್ಷ್ಮೀನಾರಾಯಣ ಪ್ರಸಾದ್ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ದೀಪಕ್,ಜಗದೀಶ್ ಪಿಎಸ್‌ಐ ಸುನಿಲ್, ಸಿದ್ದಲಿಂಗ ಬಾಣಸೆ, ಮತ್ತು ಸಿಬ್ಬಂದಿಗಳಾದ ಚಂದ್ರಶೇಖರ್ ಎ.ಎಸ್.ಐ. ಬಸವರಾಜು, ರಘು, ಜಯವರ್ಧನ್, ಜೀಸನ್, ಉಮೇಶ್, ಅರುಣ್ ಕುಮಾರ್, ಅವಿನಾಶ್, ಮಂಜು, ಪ್ರದೀಪ, ಪ್ರದೀಪ ಎನ್‌.ಎಲ್, ರವಿಕಿರಣ್, ಲೋಕೇಶ್,ಉಮೇಶ್‌, ಷರೀಫ್ ರವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧನ ಮಾಡಿದ್ದು, ಪೊಲೀಸರ ಸೇವೆಯನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಈ.ತಿಮ್ಮಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

lokesh

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

3 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

12 hours ago