ಮಂಡ್ಯ

ಜ್ಯೂವೆಲರಿ ಶಾಪ್‌ ದರೋಡೆ ಮಾಡಿದ್ದ ಆರೋಪಿಗಳ ಬಂಧನ : 35.86 ಲಕ್ಷ ಮೌಲ್ಯದ ವಸ್ತುಗಳು ವಶ

ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್‌ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತ ರಿಂದ ನಗದು ಸೇರಿ 35.86 ಲಕ್ಷ ಮೌಲ್ಯದ ಬೆಲೆಬಾಳು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ತಿಳಿಸಿದರು.

ಬಂಧಿತರು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ 154 ಗ್ರಾಂ ಚಿನ್ನ, 20 ಕೆ.ಜಿ ಬೆಳ್ಳಿಯ ಪದಾರ್ಥಗಳು, ಆಶೋಕ ಲೈಲ್ಯಾಂಡ್ ವಾಹನ, ಏರಿಟಿಕಾ ಕಾರು, ಯಮಹಾ ಆರ್ ಎಕ್ಸ್ ಬೈಕ್ ಲ್ಯಾಪ್ ಟಾಪ್, 8 ಹೆಚ್ ಎಫ್ ಇಲಾತಿ ಹಸುಗಳು, ಎಲ್ ಪಿಜಿ ಸಿಲಿಂಡರ್, ಆಕ್ಸಿಜನ್ ಸಿಲಿಂಡರ್,ವಾಟರ್ ಟ್ಯಾಂಕ್, ಗ್ಯಾಸ್ ಕಟರ್ ಮತ್ತು ನಗದು 40 ಸಾವಿರ ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಕೆ ಆರ್ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ, ಹಲಗೂರು, ಮಂಡ್ಯ ಸೆಂಟ್ರಲ್, ಚನ್ನರಾಯಪಟ್ಟಣ ಗ್ರಾಮಾಂತರ, ಚನ್ನಪಟ್ಟಣ ಗ್ರಾಮಾಂತರ, ಮೈಸೂರಿನ ಉದಯಗಿರಿ ಮತ್ತು ಬನ್ನೂರು ಪೊಲೀಸ್ ಠಾಣೆಯ ತಲಾ ಒಂದು ಪ್ರಕರಣಗಳು ಪತ್ತೆಯಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಆಗಸ್ಟ್ ನಲ್ಲಿ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹೊಳಲು- ಆಕ್ಕಿಹೆಬ್ಬಾಳು ಮುಖ್ಯ ರಸ್ತೆಯ ಲೀಲಾ ಬ್ಯಾಂಕರ್ಸ್ ಅಂಡ್ ಜ್ಯುವಲರಿ ಶಾಪ್‌ನಲ್ಲಿ ಕಳ್ಳರು ಅಂಗಡಿಯ ಹಿಂಭಾಗದಲ್ಲಿದ್ದ ವೆಂಟಿಲೇಟರ್ ಸರಳನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಗೋಡೆ ಕೊರೆದು ನುಗ್ಗಿ ಶೋಕೇಸ್‌ನಲ್ಲಿ ವ್ಯಾಪಾರಕ್ಕೆಂದು ಇಟ್ಟಿದ್ದ ಬೆಳ್ಳಿಯ ಪದಾರ್ಥಗಳನ್ನು ಕಳ್ಳತನ ಮಾಡಿದ್ದರು,
ಈ ಬಗ್ಗೆ ಕೆ.ಆರ್.ಪೇಟೆ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಮತ್ತು ಮಾಲು ಪತ್ತೆ ಬಗ್ಗೆ ಪೊಲೀಸರ ತಂಡವನ್ನು ರಚನೆ ಮಾಡಲಾಗಿತ್ತು, ಪೊಲೀಸರ ತಂಡ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ಲಾಸ್‌ನ ಉಮರ್ ನಗರದ ಬಳಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಹೆಚ್ಚಿನ ತನಿಖೆಯ ಸಂಬಂಧ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆರೋಪಿಗಳು 11 ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದರು.
ನಾಗಮಂಗಲ ಆರಕ್ಷಕ ಉಪ ಅಧೀಕ್ಷಕ ಲಕ್ಷ್ಮೀನಾರಾಯಣ ಪ್ರಸಾದ್ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ದೀಪಕ್,ಜಗದೀಶ್ ಪಿಎಸ್‌ಐ ಸುನಿಲ್, ಸಿದ್ದಲಿಂಗ ಬಾಣಸೆ, ಮತ್ತು ಸಿಬ್ಬಂದಿಗಳಾದ ಚಂದ್ರಶೇಖರ್ ಎ.ಎಸ್.ಐ. ಬಸವರಾಜು, ರಘು, ಜಯವರ್ಧನ್, ಜೀಸನ್, ಉಮೇಶ್, ಅರುಣ್ ಕುಮಾರ್, ಅವಿನಾಶ್, ಮಂಜು, ಪ್ರದೀಪ, ಪ್ರದೀಪ ಎನ್‌.ಎಲ್, ರವಿಕಿರಣ್, ಲೋಕೇಶ್,ಉಮೇಶ್‌, ಷರೀಫ್ ರವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧನ ಮಾಡಿದ್ದು, ಪೊಲೀಸರ ಸೇವೆಯನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಈ.ತಿಮ್ಮಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago