ಮಂಡ್ಯ

ನಿಮ್ಮೆಲ್ಲರ ನಿರೀಕ್ಷೆಯಂತೆ ಕೇಂದ್ರದಲ್ಲಿ ನನಗೆ ಕೃಷಿ ಖಾತೆ ಸಿಕ್ಕಿಲ್ಲ: ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಬೇಸರ

ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್‌ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾವಿರಕ್ಕೂ ಹೆಚ್ಚು ರೈತು ಆತ್ಮಹತ್ಯೆಯಾಗಿದೆ. ಇದನ್ನು ಕಂಡು ನನಗೆ ಅತೀವ ದುಖಃ ಉಂಟಾಗಿದೆ ಎಂದು ಹೇಳಿದರು.

ನಿಮ್ಮೆಲ್ಲರ ನಿರೀಕ್ಷೆಯಂತೆ ನಾನು ನನಗೂ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಭರವಸೆ ಇತ್ತು. ಆದರೆ ಆ ಖಾತೆ ಸಿಗಲಿಲ್ಲ. ದೇವರು ನನಗೆ ಮುಂದೆ ಇನ್ನು ದೊಡ್ಡ ಮಟ್ಟದ ಶಕ್ತಿ ಕೊಡುತ್ತಾನೆ ಎಂಬ ನಂಬಿಕೆ ಇದೆ. ಮಂಡ್ಯದ ನನ್ನ ಗೆಲುವು ಜನತೆಯ ಗೆಲುವು. ಕುಮಾರಣ್ಣ ಗೆದ್ದರೆ ಮಂಡ್ಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಉಪಯೋಗ ಎಂದು ನೀವೇ ಆಯ್ಕೆ ಮಾಡಿದ್ದಿರಿ. ಅಧಿಕಾರಕ್ಕೆ ಬಂದ ನಂತರ ರೈತರ ನೆರವಿಗೆ ಬರ್ತೀನಿ ಎಂದಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago