ಮಂಡ್ಯ

ಅಶೋಕ್‌ ಮಂಡ್ಯದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ: ಆರೋಪ

ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಿಲ್ಲೆಯ ಕೆಲವು ಸ್ಥಳಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ನಾನು ದಲಿತರು ಮತ್ತು ಒಕ್ಕಲಿಗರ ಪರವಾಗಿ ಇದ್ದೇನೆ ಎಂದಿದ್ದಾರೆ ಆದರೆ ಶಾಸಕ ಮುನಿರತ್ನ ಅವರು ಒಕ್ಕಲಿಗರು ಮತ್ತು ದಲಿತರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಯಾಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಯ ಮೊದಲ ಅವಧಿಯ ಸರ್ಕಾರದಲ್ಲಿ ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಬೆಂಗಳೂರು ಉತ್ತರವನ್ನು ,ಅಶೋಕ್ ಅವರು ಬೆಂಗಳೂರು ದಕ್ಷಿಣವನ್ನು ಹಂಚಿಕೊಂಡಿದ್ದಾರೆ. ಆಗಿನ ಬ್ರಹ್ಮಾಂಡ ಬ್ರಷ್ಟಾಚಾರವನ್ನು ಕಂಡಾಗ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಂಡುಬರುತ್ತದೆ. ಕಟ್ಟ ಸುಬ್ರಮಣ್ಯ ನಾಯ್ಡು ಅವರು ಜೈಲಿಗೆ ಹೋದರೆ ಅಶೋಕ್ ಅವರು ಚಾಣಾಕ್ಷತನದಿಂದ ಬಚಾವಾಗಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬೆಂಕಿ ಹಚ್ಚಲು ಅಶೋಕ ಮುಂದಾಗಿದ್ದಾರೆ

ಆರ್ ಅಶೋಕ್ ,ಸಿಟಿ ರವಿ, ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೋಮು ಗಲಭೆಗೆ ಪ್ರಶೋದನೆ ನೀಡಿರುವ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಕೆರಗೋಡು ಮತ್ತು ಶ್ರೀರಂಗಪಟ್ಟಣದಲ್ಲಿ ನಡೆದ ಘಟನೆಯಂತೆ ನಾಗಮಂಗಲದಲ್ಲಿಯೂ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ದೂರಿದರು.

ಒಗ್ಗಲಿಗ ಸ್ವಾಮೀಜಿ ಏಕೆ ಇದುವರೆಗೂ ಪ್ರತಿಕ್ರಿಯಿಸಿಲ್ಲ

ಶಾಸಕ ಮುನಿರತ್ನ ಅವರು ಸಮಾಜಕ್ಕೆ ಮಾರಕವಾಗಿದ್ದಾರೆ ಎನ್ನುವುದು ಜನತೆಗೆ ತಿಳಿದಿದೆ. ಅವರು ಒಕ್ಕಲಿಗ ಮತ್ತು ದಲಿತ ಸಮುದಾಯಕ್ಕೆ ನಿಂದನೆ ಮಾಡಿರುವ ಬಗ್ಗೆ ಇದುವರೆಗೂ ಒಕ್ಕಲಿಗ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿಲ್ಲ.ಹಾಗಾಗಿ ಈ ಬಗ್ಗೆ ಸ್ವಾಮೀಜಿ ಧ್ವನಿ ಎತ್ತಬೇಕು ಎಂದು ತಾಕೀತು ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ನೀಲಾ, ಸೋನಿಯಾ ಬ್ರಿಗೇಡ್ ಜಿಲ್ಲಾಧ್ಯಕ್ಷೆ ವೀಣಾ ಶಂಕರ್ ,ನಗರ ಸಭೆ ಮಾಜಿ ಸದಸ್ಯ ನಾಗೇಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಳ್ಳಿ ಮಂಜುನಾಥ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

2 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

3 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

6 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

10 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

10 hours ago