ಮಂಡ್ಯ: ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಕಾವೇರಿ ನದಿ ತೀರದಲ್ಲಿರುವ ಗೌತಮ ಆಶ್ರಮವು ಜಲಾವೃತಗೊಂಡಿದ್ದು, ಆಶ್ರಮದ ಗಜಾನನ ಸ್ವಾಮೀಜಿಯನ್ನು ರಕ್ಷಣೆ ಮಾಡಲಾಗಿದೆ.
ಕಾವೇರಿ ನದಿಯ ನೀರಿನ ಹೊರಹರಿವು ಹೆಚ್ಚಿದ್ದರಿಂದ ಆಶ್ರಮವು ದ್ವೀಪವಾಗಿ ಮಾರ್ಪಟ್ಟಿದ್ದು, ಸ್ವಾಮೀಜಿ ಸೇರಿದಂತೆ ಇಬ್ಬರನ್ನು ಅಗ್ನಿಶಾಮಕ ತಂಡ, ತುರ್ತು ಸೇವೆ ಇಲಾಖೆ ಹಾಗೂ ಎಮ್ಇಜಿ ತಂಡಗಳು ಸೇರಿ ರಕ್ಷಣೆ ಮಾಡಿ ದಡಕ್ಕೆ ಕರೆತರಲಾಯಿತು.
ಈ ಕಾರ್ಯಚರಣೆಯು ಮೈಸೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ ಎಸ್ ಜಯರಾಮ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ ಕೆ ಪಿ, ರಾಘವೇಂದ್ರ ಬಿಎಮ್, ರಮೇಶ್.ಸಿ ಅವರ ನೇತೃತ್ವದಲ್ಲಿ ಸುಮಾರು 25 ಜನ ಸಿಬ್ಬಂದಿಯರಿದ್ದರು.
ಈ ಹಿಂದೆಯು ಸಹ ಆಶ್ರಮವು ಜಲಾವೃತಗೊಂಡಿತ್ತು. ಪ್ರವಾಹ ಬಂದರೂ ಗಜಾನನ ಸ್ವಾಮೀಜಿ ಆಶ್ರಮದಲ್ಲೇ ಉಳಿದುಕೊಂಡಿದ್ದರು. ಬಳಿಕ ಎನ್ಡಿಆರ್ಆಫ್ ಹಾಗೂ ತಾಲೂಕು ಆಡಳಿತ ಸ್ವಾಮೀಜಿಯ ಮನವೊಲಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರ ಮಾಡಲಾಗಿತ್ತು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…