ಮಂಡ್ಯ: ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಕಾವೇರಿ ನದಿ ತೀರದಲ್ಲಿರುವ ಗೌತಮ ಆಶ್ರಮವು ಜಲಾವೃತಗೊಂಡಿದ್ದು, ಆಶ್ರಮದ ಗಜಾನನ ಸ್ವಾಮೀಜಿಯನ್ನು ರಕ್ಷಣೆ ಮಾಡಲಾಗಿದೆ.
ಕಾವೇರಿ ನದಿಯ ನೀರಿನ ಹೊರಹರಿವು ಹೆಚ್ಚಿದ್ದರಿಂದ ಆಶ್ರಮವು ದ್ವೀಪವಾಗಿ ಮಾರ್ಪಟ್ಟಿದ್ದು, ಸ್ವಾಮೀಜಿ ಸೇರಿದಂತೆ ಇಬ್ಬರನ್ನು ಅಗ್ನಿಶಾಮಕ ತಂಡ, ತುರ್ತು ಸೇವೆ ಇಲಾಖೆ ಹಾಗೂ ಎಮ್ಇಜಿ ತಂಡಗಳು ಸೇರಿ ರಕ್ಷಣೆ ಮಾಡಿ ದಡಕ್ಕೆ ಕರೆತರಲಾಯಿತು.
ಈ ಕಾರ್ಯಚರಣೆಯು ಮೈಸೂರು ವಿಭಾಗದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ ಎಸ್ ಜಯರಾಮ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ ಕೆ ಪಿ, ರಾಘವೇಂದ್ರ ಬಿಎಮ್, ರಮೇಶ್.ಸಿ ಅವರ ನೇತೃತ್ವದಲ್ಲಿ ಸುಮಾರು 25 ಜನ ಸಿಬ್ಬಂದಿಯರಿದ್ದರು.
ಈ ಹಿಂದೆಯು ಸಹ ಆಶ್ರಮವು ಜಲಾವೃತಗೊಂಡಿತ್ತು. ಪ್ರವಾಹ ಬಂದರೂ ಗಜಾನನ ಸ್ವಾಮೀಜಿ ಆಶ್ರಮದಲ್ಲೇ ಉಳಿದುಕೊಂಡಿದ್ದರು. ಬಳಿಕ ಎನ್ಡಿಆರ್ಆಫ್ ಹಾಗೂ ತಾಲೂಕು ಆಡಳಿತ ಸ್ವಾಮೀಜಿಯ ಮನವೊಲಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರ ಮಾಡಲಾಗಿತ್ತು.
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…
ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್…
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…