ಮಂಡ್ಯ

ಸಿಲಿಂಡರ್‌ ಸ್ಫೋಟ : ನೊಂದ ಕುಟುಂಬಕ್ಕೆ ನೆರವು

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು.

ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ ಸೇವಕ ವಿಜಯ್ ರಾಮೇಗೌಡ ಅವರು, ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಬಲ್ಲೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಸಿ.ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ತಮ್ಮದೇ ರೀತಿಯಲ್ಲಿ ಸಹಾಯ, ಸಹಕಾರ ಮಾಡುತ್ತಿರುವ ಬೂಕನಕೆರೆ ಗ್ರಾಮದ ಮಿತ್ರ ಫೌಂಡೇಷನ್ ಅಧ್ಯಕ್ಷರಾದ ವಿಜಯ್ ರಾಮೇಗೌಡ ಅವರು ಸಮಾಜ ಸೇವೆಯ ಮೂಲಕ ತಾಲ್ಲೂಕಿನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದರು.

ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ಎಲ್.ದೇವರಾಜು, ಬಲ್ಲೇನಹಳ್ಳಿ ಪಿಎಸಿಸಿಎಸ್ ಅಧ್ಯಕ್ಷ ಡಿ.ವಿ.ಕುಮಾರ್, ಗುತ್ತಿಗೆದಾರ ಬಿ.ಎಸ್.ರಾಮು, ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಗ್ರಾಪಂ ಮಾಜಿ ಸದಸ್ಯ ಮಹಾದೇವ್, ಡೇರಿ ಮಾಜಿ ಅಧ್ಯಕ್ಷ ಸ್ವಾಮಿಗೌಡ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

11 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

23 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

42 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

58 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago