ಮಂಡ್ಯ

ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ : ಡಾ.ರಾಮಪ್ರಸಾತ್ ಮನೋಹರ್

ಮಂಡ್ಯ : ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ ಎಂದು ಕಾವೇರಿ ಆರತಿ ಸಮಿತಿ ಅಧ್ಯಕ್ಷ ಡಾ.ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವಾರು ಜಲ ಕ್ರೀಡೆಗಳು ಪ್ರವಾಸಿಗರಿಂದ ಅಪಾರ ಪ್ರತಿಕ್ರಿಯೆ ಪಡೆಯುತ್ತಿವೆ. ಸಾಹಸ ಕ್ರೀಡೆಗಳು ಯುವಕರಿಗೆ ಹೊಸ ಉತ್ಸಾಹ ನೀಡುತ್ತಿದರೆ, ಜಲಕ್ರೀಡೆಗಳು ಕುಟುಂಬ ಸಮೇತರಾಗಿ ಬರುವವರಿಗೆ ವಿಶೇಷ ಅನುಭವ ನೀಡುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ:-ಕಾಲ್ತುಳಿತ | ‌ ನಟ ವಿಜಯ್ ತಪ್ಪಿಲ್ಲ, ಡಿಎಂಕೆ ಸರ್ಕಾರ ದೂಷಿಸಿದೆ ಬಿಜೆಪಿ ; ಪರಿಹಾರ ಘೋಷಣೆ

ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ಜಲಕ್ರೀಡೆಗಳಿಗೆ ಪ್ರವಾಸಿಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸಾಹಸ, ಮನರಂಜನೆ ಮತ್ತು ಸಂಸ್ಕೃತಿಯ ಸಂಯೋಜನೆಯಿಂದ ಕೆಆರ್‌ಎಸ್ ಪ್ರವಾಸೋದ್ಯಮದ ಹೊಸ ಅಧ್ಯಾಯವನ್ನು ಬರೆಯುತ್ತಿದೆ. ಮಕ್ಕಳಿಗಾಗಿ ಸುಮಾರು ೮೦ ಆಟಗಳನ್ನು ಪರಿಚಯಿಸಲಾಗಿದ್ದು, ಎಲ್ಲ ವಯಸ್ಸಿನ ಪ್ರವಾಸಿಗರು ತಮ್ಮ ರುಚಿಗೆ ತಕ್ಕ ಅನುಭವ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ನೂತನ ರೀತಿಯ ಈ ಆಕರ್ಷಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು ಮನೋಹರ್ ಅವರು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago