ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟಿಸಲಾಯಿತು.
ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಭೂ ವಿವಾದದ ನೆಪ ಮಾಡಿ, ಅಮಾನುಷವಾಗಿ ದೌರ್ಜನ್ಯ ಮಾಡಲಾಗಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾ ಡಳಿತ ದಲಿತರ ಮಾನ, ಪ್ರಾಣ, ಆಸ್ತಿ ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮ ಸರ್ವೆ ನಂ.೧೨/೬ರಲ್ಲಿನ ೦೫ ಗುಂಟೆ ಸ್ವಂತ ಜಮೀನು ಮತ್ತು ೧೨/೫ರ ೦೮ ಖರಾಬು ಭೂಮಿಯ ಸ್ವಾಧಿನಾನುಭವದಲ್ಲಿರುವ ಕಟ್ಟಿಗೆರೆ ದಲಿತ ಮಹಿಳೆ ರಜನಿ ಅವರು ೨೦ ತೆಂಗಿನ ಮರಗಳನ್ನು ಬೆಳೆಸಿಕೊಂಡು ಜೀವನ ನಡೆಸುತ್ತಿರುವ ಭೂಮಿಯನ್ನು ಕಂದಾಯ ಮತ್ತು ಸರ್ವೆ ಇಲಾಖಾಧಿಕಾರಿಗಳು ನಿಮಾನುಸಾರ ಕ್ರಮವಹಿಸದೆ ಭೂ ವಿವಾದಕ್ಕೆ ಆಸ್ಪದ ಮಾಡಿ, ರಜನಿ ಅವರ ಮೇಲೆ ದೌರ್ಜನ್ಯ ನಡೆಸಿರುವವರ ವಿರುದ್ಧ ಹಾಗೂ ಅಧಿಕಾರಿಗಳ ಮೇಲೆ ಕಾನೂನು ಕ್ರಮಹಿಸಬೇಕೆಂದು ಆಗ್ರಹಿಸಿದರು.
ಹಾಲಿ ಇರುವ ಸಾರ್ವಜನಿಕ ಬಂಡಿದಾರಿಯನ್ನು ಬಿಡದೆ ದಾರಿಗೆ ಅಡ್ಡಲಾಗಿ ಸೌದೆಗಳನ್ನು ಗುಡ್ಡೆಹಾಕಿ ಭತ್ತದ ಗಾಡಿ ಹೋಗಲು ದಾರಿ ಬಿಡದೆ ಅಡ್ಡಿಪಡಿಸಿ ದಲಿತ ಮಹಿಳೆ ರಜನಿ ಅವರನ್ನು ಬಹಿರಂಗವಾಗಿ ಜಾತಿ ನಿಂದನೆ, ದೈಹಿಕ ಹಲ್ಲೆ, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಶರತ್, ಬೆಟ್ಟೇಗೌಡ, ಸಿದಣ್ಣ, ಶಿವಣ್ಣ, ಸ್ವರೂಪ್ ಅವರನ್ನು ಕೂಡಲೇ ಬಂಽಸಬೇಕೆಂದು ಒತ್ತಾಯಿಸಿದರು.
ಕದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಉಪಾಧ್ಯಕ್ಷ ಬಿ.ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ಹೊಸಹಳ್ಳಿ, ಮುಖಂಡರಾದ ನಾಗರಾಜು, ಸಿದ್ದಯ್ಯ, ಮುತ್ತರಾಜು, ಪುಟ್ಟಲಿಂಗಯ್ಯ, ಶಶಿರೇಖಾ, ಶರಾವತಿ, ಮಹದೇವ, ಸುರೇಶ್ ಕುಮಾರ್, ವೆಂಕಟೇಶ್, ಕರಿಯಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…