ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟಿಸಲಾಯಿತು.
ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಭೂ ವಿವಾದದ ನೆಪ ಮಾಡಿ, ಅಮಾನುಷವಾಗಿ ದೌರ್ಜನ್ಯ ಮಾಡಲಾಗಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾ ಡಳಿತ ದಲಿತರ ಮಾನ, ಪ್ರಾಣ, ಆಸ್ತಿ ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮ ಸರ್ವೆ ನಂ.೧೨/೬ರಲ್ಲಿನ ೦೫ ಗುಂಟೆ ಸ್ವಂತ ಜಮೀನು ಮತ್ತು ೧೨/೫ರ ೦೮ ಖರಾಬು ಭೂಮಿಯ ಸ್ವಾಧಿನಾನುಭವದಲ್ಲಿರುವ ಕಟ್ಟಿಗೆರೆ ದಲಿತ ಮಹಿಳೆ ರಜನಿ ಅವರು ೨೦ ತೆಂಗಿನ ಮರಗಳನ್ನು ಬೆಳೆಸಿಕೊಂಡು ಜೀವನ ನಡೆಸುತ್ತಿರುವ ಭೂಮಿಯನ್ನು ಕಂದಾಯ ಮತ್ತು ಸರ್ವೆ ಇಲಾಖಾಧಿಕಾರಿಗಳು ನಿಮಾನುಸಾರ ಕ್ರಮವಹಿಸದೆ ಭೂ ವಿವಾದಕ್ಕೆ ಆಸ್ಪದ ಮಾಡಿ, ರಜನಿ ಅವರ ಮೇಲೆ ದೌರ್ಜನ್ಯ ನಡೆಸಿರುವವರ ವಿರುದ್ಧ ಹಾಗೂ ಅಧಿಕಾರಿಗಳ ಮೇಲೆ ಕಾನೂನು ಕ್ರಮಹಿಸಬೇಕೆಂದು ಆಗ್ರಹಿಸಿದರು.
ಹಾಲಿ ಇರುವ ಸಾರ್ವಜನಿಕ ಬಂಡಿದಾರಿಯನ್ನು ಬಿಡದೆ ದಾರಿಗೆ ಅಡ್ಡಲಾಗಿ ಸೌದೆಗಳನ್ನು ಗುಡ್ಡೆಹಾಕಿ ಭತ್ತದ ಗಾಡಿ ಹೋಗಲು ದಾರಿ ಬಿಡದೆ ಅಡ್ಡಿಪಡಿಸಿ ದಲಿತ ಮಹಿಳೆ ರಜನಿ ಅವರನ್ನು ಬಹಿರಂಗವಾಗಿ ಜಾತಿ ನಿಂದನೆ, ದೈಹಿಕ ಹಲ್ಲೆ, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಶರತ್, ಬೆಟ್ಟೇಗೌಡ, ಸಿದಣ್ಣ, ಶಿವಣ್ಣ, ಸ್ವರೂಪ್ ಅವರನ್ನು ಕೂಡಲೇ ಬಂಽಸಬೇಕೆಂದು ಒತ್ತಾಯಿಸಿದರು.
ಕದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಉಪಾಧ್ಯಕ್ಷ ಬಿ.ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ಹೊಸಹಳ್ಳಿ, ಮುಖಂಡರಾದ ನಾಗರಾಜು, ಸಿದ್ದಯ್ಯ, ಮುತ್ತರಾಜು, ಪುಟ್ಟಲಿಂಗಯ್ಯ, ಶಶಿರೇಖಾ, ಶರಾವತಿ, ಮಹದೇವ, ಸುರೇಶ್ ಕುಮಾರ್, ವೆಂಕಟೇಶ್, ಕರಿಯಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…