ಮಂಡ್ಯ

ರೈಲು ತಡೆಗೆ ಯತ್ನ : ರೈತರ ಬಂಧನ

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು.

ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ವಂದೇ ಭಾರತ್ ರೈಲು ತಡೆಗೆ ಸಿದ್ಧತೆ ನಡೆಸಿ ಹಳಿ ಮೇಲೆ ಓಡಿದ ರೈತರನ್ನು ಪೊಲೀಸರು ತಡೆದು ಬಂದಿಸಿದ್ದಾರೆ. ರೈತರನ್ನು ಎರಡು ಬಸ್ ಕಳಲ್ಲಿ ತುಂಬಿಕೊಂಡು ಕರೆದುಕೊಂಡು ಹೋದರು.

ರೈಲು ತಡೆ ಚಳವಳಿ ನಡೆಸುವುದಾಗಿ ಘೋಷಿಸಿದ್ದ ರೈತರನ್ನು ತಡೆಯಲು ನೂರು ಮೀಟರ್ ದೂರದಲ್ಲೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು, ರೈಲು ತಡೆಯಲು ರೈತರು ಜಮಾವಣೆ ಗೊಂಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು,ಪ್ರತಿಭಟನಾ ನಿರತ ರೈತರನ್ನು ತಡೆದ ಪೊಲೀಸರ ವಿರುದ್ಧವು ದಿಕ್ಕಾರ ಕೂಗಲಾಯಿತು.

ರೈಲ್ವೆ ಹಳಿ ಬಳಿ ಪ್ರತಿಭಟನೆಗೆ ಅವಕಾಶ ಕಲ್ಪಿಸುವಂತೆ ರೈತರು ಕೋರಿದಾಗ ನೂರಾರು ರೈತರನ್ನು ಬ್ಯಾರಿಕೇಡ್ ಬಳಿ ತಡೆದು ಎಲ್ಲರಿಗೂ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏಳು ರೈತರಿಗೆ ಅವಕಾಶ ಮಾಡಿಕೊಟ್ಟರು.

ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು, ಪ್ರತಿಭಟನಾ ನಿರತ ರೈತರನ್ನು ನಿಯಂತ್ರಣ ಮಾಡಲು ಪೊಲೀಸರು ಹರ ಸಾಹಸ ಪಟ್ಟರು. ಕೆಲವು ರೈತರು ಒಳ ನುಗ್ಗಿ ಹಳಿಗಳ ಮೇಲೆ ಓಡಿದರು,ಪೊಲೀಸರು ಹಿಡಿದು ಎಲ್ಲಾ ರೈತರನ್ನು ಬಂದಿಸಿದರು. ರೈಲು ಹಳಿಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

26 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

41 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago