ಮಂಡ್ಯ

ರೈಲು ತಡೆಗೆ ಯತ್ನ : ರೈತರ ಬಂಧನ

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು.

ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ವಂದೇ ಭಾರತ್ ರೈಲು ತಡೆಗೆ ಸಿದ್ಧತೆ ನಡೆಸಿ ಹಳಿ ಮೇಲೆ ಓಡಿದ ರೈತರನ್ನು ಪೊಲೀಸರು ತಡೆದು ಬಂದಿಸಿದ್ದಾರೆ. ರೈತರನ್ನು ಎರಡು ಬಸ್ ಕಳಲ್ಲಿ ತುಂಬಿಕೊಂಡು ಕರೆದುಕೊಂಡು ಹೋದರು.

ರೈಲು ತಡೆ ಚಳವಳಿ ನಡೆಸುವುದಾಗಿ ಘೋಷಿಸಿದ್ದ ರೈತರನ್ನು ತಡೆಯಲು ನೂರು ಮೀಟರ್ ದೂರದಲ್ಲೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು, ರೈಲು ತಡೆಯಲು ರೈತರು ಜಮಾವಣೆ ಗೊಂಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು,ಪ್ರತಿಭಟನಾ ನಿರತ ರೈತರನ್ನು ತಡೆದ ಪೊಲೀಸರ ವಿರುದ್ಧವು ದಿಕ್ಕಾರ ಕೂಗಲಾಯಿತು.

ರೈಲ್ವೆ ಹಳಿ ಬಳಿ ಪ್ರತಿಭಟನೆಗೆ ಅವಕಾಶ ಕಲ್ಪಿಸುವಂತೆ ರೈತರು ಕೋರಿದಾಗ ನೂರಾರು ರೈತರನ್ನು ಬ್ಯಾರಿಕೇಡ್ ಬಳಿ ತಡೆದು ಎಲ್ಲರಿಗೂ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏಳು ರೈತರಿಗೆ ಅವಕಾಶ ಮಾಡಿಕೊಟ್ಟರು.

ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು, ಪ್ರತಿಭಟನಾ ನಿರತ ರೈತರನ್ನು ನಿಯಂತ್ರಣ ಮಾಡಲು ಪೊಲೀಸರು ಹರ ಸಾಹಸ ಪಟ್ಟರು. ಕೆಲವು ರೈತರು ಒಳ ನುಗ್ಗಿ ಹಳಿಗಳ ಮೇಲೆ ಓಡಿದರು,ಪೊಲೀಸರು ಹಿಡಿದು ಎಲ್ಲಾ ರೈತರನ್ನು ಬಂದಿಸಿದರು. ರೈಲು ಹಳಿಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

lokesh

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

18 hours ago