ಮಂಡ್ಯ

ರೈಲು ತಡೆಗೆ ಯತ್ನ : ರೈತರ ಬಂಧನ

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು.

ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ವಂದೇ ಭಾರತ್ ರೈಲು ತಡೆಗೆ ಸಿದ್ಧತೆ ನಡೆಸಿ ಹಳಿ ಮೇಲೆ ಓಡಿದ ರೈತರನ್ನು ಪೊಲೀಸರು ತಡೆದು ಬಂದಿಸಿದ್ದಾರೆ. ರೈತರನ್ನು ಎರಡು ಬಸ್ ಕಳಲ್ಲಿ ತುಂಬಿಕೊಂಡು ಕರೆದುಕೊಂಡು ಹೋದರು.

ರೈಲು ತಡೆ ಚಳವಳಿ ನಡೆಸುವುದಾಗಿ ಘೋಷಿಸಿದ್ದ ರೈತರನ್ನು ತಡೆಯಲು ನೂರು ಮೀಟರ್ ದೂರದಲ್ಲೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು, ರೈಲು ತಡೆಯಲು ರೈತರು ಜಮಾವಣೆ ಗೊಂಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು,ಪ್ರತಿಭಟನಾ ನಿರತ ರೈತರನ್ನು ತಡೆದ ಪೊಲೀಸರ ವಿರುದ್ಧವು ದಿಕ್ಕಾರ ಕೂಗಲಾಯಿತು.

ರೈಲ್ವೆ ಹಳಿ ಬಳಿ ಪ್ರತಿಭಟನೆಗೆ ಅವಕಾಶ ಕಲ್ಪಿಸುವಂತೆ ರೈತರು ಕೋರಿದಾಗ ನೂರಾರು ರೈತರನ್ನು ಬ್ಯಾರಿಕೇಡ್ ಬಳಿ ತಡೆದು ಎಲ್ಲರಿಗೂ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏಳು ರೈತರಿಗೆ ಅವಕಾಶ ಮಾಡಿಕೊಟ್ಟರು.

ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು, ಪ್ರತಿಭಟನಾ ನಿರತ ರೈತರನ್ನು ನಿಯಂತ್ರಣ ಮಾಡಲು ಪೊಲೀಸರು ಹರ ಸಾಹಸ ಪಟ್ಟರು. ಕೆಲವು ರೈತರು ಒಳ ನುಗ್ಗಿ ಹಳಿಗಳ ಮೇಲೆ ಓಡಿದರು,ಪೊಲೀಸರು ಹಿಡಿದು ಎಲ್ಲಾ ರೈತರನ್ನು ಬಂದಿಸಿದರು. ರೈಲು ಹಳಿಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago