ಮಂಡ್ಯ

ಸರಗಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಇಬ್ಬರು ಪೊಲೀಸರ ವಶಕ್ಕೆ

ವರದಿ: ಮುದ್ದುರವಿ ಮದ್ದೂರು

ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ ಆರೋಪಿಗಳು, ಆಕೆಯ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಮಹಿಳೆ ಚೀರಾಡುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಧಾವಿಸಿ ಇಬ್ಬರು ಸರಗಳ್ಳರನ್ನು ಹಿಡಿದಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಸಗರಹಳ್ಳಿ ಪೊಲೀಸ್ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಸರಗಳ್ಳತನ ಯತ್ನದ ಮಾಹಿತಿ ತಿಳಿದು ಸ್ಥಳಕ್ಕೆ ಎಸ್ಪಿ ಶೋಭಾರಾಣಿ ಭೇಟಿ ನೀಡಿ, ಮಹಿಳೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಬಂಧಿತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ.

ಈ ಪ್ರಕರಣ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಸಭೆಗೆ ನಿತೀಶ್‌ ಕುಮಾರ್‌ ನಾಮಪತ್ರ ಸಲ್ಲಿಕೆ

ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್‌ ಕುಮಾರ್‌ ಅವರು ಇಂದು…

25 mins ago

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…

45 mins ago

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

6 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

7 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

7 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

8 hours ago