ಮಂಡ್ಯ

ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ಕನ್ನಡ ಸಂಘಟನೆ ಮುಖಂಡರ ಬಂಧನ

ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ್ದ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದರು.

ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟಿಸಿ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕನ್ನಡ ಸಂಘಟನೆ ಹೋರಾಟಗಾರರನ್ನು ಬಲವಂತವಾಗಿ ಬಂಧಿಸಿದ ಪೊಲೀಸರು ವಾಹನದಲ್ಲಿ ತುಂಬಿಕೊಂಡು ಹೋದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

andolanait

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

9 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

1 hour ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

5 hours ago