ಮಂಡ್ಯ

ಲೈವ್‌ ವಿಡಿಯೊ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನ..!

ಮಂಡ್ಯ : ನಿರಂತರ ಗೈರು ಹಾಜರಿಯಿಂದ ವಜಾಗೊಂಡಿದ್ದ ಮೈಶುಗರ್ ಕಾರ್ಖಾನೆಯ ನೌಕರನೊಬ್ಬ ನಿವೃತ್ತಿ ಹಣ ನೀಡದಿದ್ದಕ್ಕೆ ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿರುವ ಘಟನೆ ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ ನಡೆದಿದೆ.

ಹುಲಿವಾನ ಗ್ರಾಮದ ನಿವಾಸಿ ಎಚ್.ಎನ್.ಮಹದೇವಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಮೈಶುಗರ್ ನಿವೃತ್ತ ನೌಕರ.

೧೦ ವರ್ಷಗಳ ಹಿಂದೆ ಮಹದೇವಸ್ವಾಮಿ ಅವರು ಸ್ವಯಂ ನಿವೃತ್ತಿ ಪಡೆದಿದ್ದರು. ಇದುವರೆಗೂ ನಿವೃತ್ತಿ ಹಣ ನೀಡಿಲ್ಲ. ಹಣ ನೀಡದೆ ಮೈಶುಗರ್ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಲೈವ್ ವಿಡಿಯೋ ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಮತ್ತು ಮೈಶುಗರ್ ಅಧ್ಯಕ್ಷರಿಗೂ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಕಾನೂನು ಪ್ರಕ್ರಿಯೆ ಎಂದು ಪದೇ ಪದೇ ಸತಾಯಿಸಿದ್ದಾರೆ. ಹಣ ನೀಡದೆ ಹೋದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಈ ಹಿಂದೆಯೂ ವಿಡಿಯೋ ಮಾಡಿ ಹೇಳಿದ್ದೆ. ಆಗಲು ಹಣ ನೀಡಲಿಲ್ಲ ಎಂದು ಅಧ್ಯಕ್ಷರು ಮತ್ತು ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಮಹದೇವಸ್ವಾಮಿ ದೂರಿದ್ದಾರೆ.

ಸದ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮಹದೇವಸ್ವಾಮಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ್ಯಾಯ ಕೊಡಿಸುವುದಾಗಿ ಅಧ್ಯಕ್ಷರ ಭರವಸೆ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೈಷುಗರ್ ನಿವೃತ್ತ ನೌಕರ ಮಹದೇವಸ್ವಾಮಿ ಹಾಗೂ ಪತ್ನಿ, ಪುತ್ರಿಯನ್ನು ಭೇಟಿ ಮಾಡಿದ ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ಅವರು, ಸಮಾಧಾನ ಹೇಳಿ, ಕಾನೂನಾತ್ಮಕವಾಗಿ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ಮಿಮ್ಸ್‌ಗೆ ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ಅವರು ಭೇಟಿ ನೀಡುತ್ತಿದ್ದಂತೆ ಮಹದೇವಸ್ವಾಮಿ ಅವರ ಪತ್ನಿ ಜ್ಯೋತಿ, ಪುತ್ರಿ ಯೋಗಿತಾ ಅವರು ಅಧ್ಯಕ್ಷರ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು.

ಇದನ್ನು ಓದಿ : ವಾಹನ ಡಿಕ್ಕಿ : ರಸ್ತೆ ದಾಟುತಿದ್ದ ಚಿರತೆ ಸಾವು

ಇದಕ್ಕೆ ಸ್ಪಂದಿಸಿದ ಸಿ.ಡಿ.ಗಂಗಾಧರ ಅವರು, ಇಂತಹ ಘಟನೆ ನಡೆಯಬಾರದಿತ್ತು. ಕಾನೂನಾತ್ಮಕವಾಗಿ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ಕಾನೂನು ತೊಡಕಿನಿಂದ ಹಣ ನೀಡಲು ವಿಳಂಬ

ನೌಕರ ಮಹದೇವಸ್ವಾಮಿ ಅವರು ನಿರಂತರ ಗೈರು ಹಾಜರಿಯಿಂದ ವಜಾಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾನೂನಿನಡಿ ಬಗೆಹರಿಸಿಕೊಳ್ಳಬೇಕು ಇಲ್ಲವೇ ಕೇಸನ್ನು ವಾಪಸ್ ತೆಗೆದುಕೊಂಡ ನಂತರ ಹಣ ನೀಡುವುದಾಗಿ ಈ ಹಿಂದಿನ ಆಡಳಿತ ಮಂಡಳಿಯವರು ಭರವಸೆ ನಿಡಿದ್ದರು. ಅದರಂತೆ ಮಹದೇವಸ್ವಾಮಿ ಅವರು ಪ್ರಕರಣವನ್ನು ವಾಪಸ್ ಪಡೆದಿದ್ದರು. ಆದರೆ, ಪ್ರಕ್ರಿಯೆ ನಿಧಾನವಾಗಿ ಹಣ ನೀಡುವುದು ವಿಳಂಬವಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ತಿಳಿಸಿದರು.

ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹದೇವಸ್ವಾಮಿಯನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮತನಾಡಿದ ಅವರು, ಕಳೆದ ೧೦ ವರ್ಷಗಳ ಹಿಂದೆ ಕೆಲಸದಿಂದ ವಜಾ ಮತ್ತು ಅಮಾನತ್ತಾದ ೧೩ ಜನರಿದ್ದಾರೆ. ಅವರೆಲ್ಲರೂ ಕಾನೂನಿನ ಮೊರೆ ಹೋಗಿ ಪ್ರಶ್ನೆ ಮಾಡಿದ್ದಾರೆ. ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸಿಕೊಂಡು ಬಂದರೆ ಹಣ ನೀಡಲಾಗುವುದು.

ಮಹದೇವಸ್ವಾಮಿ ಅವರು ಈ ಮಧ್ಯೆ ಎರಡು ಬಾರಿ ಮನವಿ ಮಾಡಿದ್ದರು. ನಾನೂ ಕೂಡ ಕಾನೂನಿನ ತಜ್ಞರೊಂದಿಗೆ ಮಾತನಾಡಲಾಗಿ, ಕೆಲ ಸಲಹೆ ಕೊಟ್ಟಿದ್ದರು. ಅದು ಚರ್ಚೆ ಹಂತದಲ್ಲಿರುವಾಗಲೇ ಈರೀತಿ ಅನಾಹುತವಾಗಿದೆ. ನಮ್ಮ ಕಂಪೆನಿಯಿಂದ ಮೂರ‍್ನಾಲ್ಕು ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾನೂನು ತಜ್ಞರೊಂದಿಗೆ ಮಾತನಾಡಿ ನ್ಯಾಯ ಕೊಡಿಸುತ್ತೇವೆ ಎಂದರು.

ಮಹದೇವಸ್ವಾಮಿ ಚಿಕಿತ್ಸಾ ವೆಚ್ಚವನ್ನು ಕಂಪೆನಿ ಭರಿಸಲಿದೆ. ಎಲ್ಲದಕ್ಕೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ವೈದ್ಯರ ಜತೆ ಮಾತನಾಡಿದ್ದು, ವೈದ್ಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಮೈಷುಗರ್ ಸಂಸ್ಥೆಗೆ ನಾನು ಯಜಮಾನನಲ್ಲ, ಕಾವಲುಗಾರ. ನಿವೃತ್ತ ನೌಕರರಿಗೆ ಅನ್ಯಾಯ ಆಗಲು ಬಿಡಲ್ಲ. ಅವರ ಕುಟುಂಬಕ್ಕೆ ಅನುಕೂಲ ಮಾಡಿಕೊಡುತ್ತೇನೆ ಎಂದು ಗಂಗಾಧರ್ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

12 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

15 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

16 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

17 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

18 hours ago