ಮಂಡ್ಯ

ಫೈನಾನ್ಸ್‌ ಕಿರುಕುಳ ತಪ್ಪಿಸಿ: ದಸಂಸ ಆಗ್ರಹ

ಮಂಡ್ಯ : ಜಿಲ್ಲೆ ಸೇರಿದಂತೆ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಲೂಟಿ ಮಾಡುವ ಫೈನಾನ್ಸ್ ಸಂಸ್ಥೆಗಳು ದಾಂಗುಡಿ ಇಡುತ್ತಿವೆ. ಕಡು ಬಡವರು, ಮಹಿಳೆಯರು ಇದರಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಮಳವಳ್ಳಿಯಲ್ಲಿ ಮಹಿಳೆಯೊಬ್ಬರು ಫೈನಾನ್ಸ್ ಸಂಸ್ಥೆಯ ಹಾವಳಿ ತಡೆಯದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಫೈನಾನ್ಸ್ ಸಂಸ್ಥೆಗಳ ವಿರುದ್ಧ ಹೊಳಲು, ಮಳವಳ್ಳಿ ಸೇರಿದಂತೆ ಕೆಲವೆಡೆ ಪ್ರತಿಭಟನೆ ನಡೆದಿದೆ.  ಮಳವಳ್ಳಿಯಲ್ಲಿ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೊಣೆಯನ್ನು ಜಿಲ್ಲಾಡಳಿತ ಮತ್ತು ಸರ್ಕಾರ ಹೊರಬೇಕು ಎಂದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ಹೆಣ್ಣುಮಗಳ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿ ,ಆಕೆಯ ಕುಟುಂಬದವರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಕೇವಲ ಏಳುನೂರು ರೂಪಾಯಿ ಸಾಲ ಮರುಪಾವತಿಗಾಗಿ ಫೈನಾನ್ಸ್ ಸಂಸ್ಥೆ ಆ ಹೆಣ್ಣು ಮಗಳಿಗೆ ಕಿರುಕುಳ ನೀಡಿದ್ದು ಇದನ್ನು ಸಹಿಸಲಾರದೆ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ರೈತರಿಗೂ ಕೂಡ ಈ ಸಂಸ್ಥೆಗಳು ಕಿರುಕುಳ ನೀಡುತ್ತಿದೆ. ಆದ್ದರಿಂದ ಈ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ವಹಿಸುವಂತೆ ಅವರು ಒತ್ತಾಯಿಸಿದರು .

ಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಆನಂದ್ ,ಜಿಲ್ಲಾ ಕಾರ್ಯದರ್ಶಿ ಸುರೇಶ್ ಕುಮಾರ್ ,ಮೈಸೂರು ವಿಭಾಗೀಯ ಸಂಚಾಲಕ ಅನಿಲ್ ಕುಮಾರ್ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago