ಮಂಡ್ಯ : ಜಿಲ್ಲೆ ಸೇರಿದಂತೆ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಲೂಟಿ ಮಾಡುವ ಫೈನಾನ್ಸ್ ಸಂಸ್ಥೆಗಳು ದಾಂಗುಡಿ ಇಡುತ್ತಿವೆ. ಕಡು ಬಡವರು, ಮಹಿಳೆಯರು ಇದರಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಮಳವಳ್ಳಿಯಲ್ಲಿ ಮಹಿಳೆಯೊಬ್ಬರು ಫೈನಾನ್ಸ್ ಸಂಸ್ಥೆಯ ಹಾವಳಿ ತಡೆಯದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಫೈನಾನ್ಸ್ ಸಂಸ್ಥೆಗಳ ವಿರುದ್ಧ ಹೊಳಲು, ಮಳವಳ್ಳಿ ಸೇರಿದಂತೆ ಕೆಲವೆಡೆ ಪ್ರತಿಭಟನೆ ನಡೆದಿದೆ. ಮಳವಳ್ಳಿಯಲ್ಲಿ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೊಣೆಯನ್ನು ಜಿಲ್ಲಾಡಳಿತ ಮತ್ತು ಸರ್ಕಾರ ಹೊರಬೇಕು ಎಂದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ಹೆಣ್ಣುಮಗಳ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿ ,ಆಕೆಯ ಕುಟುಂಬದವರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.
ಕೇವಲ ಏಳುನೂರು ರೂಪಾಯಿ ಸಾಲ ಮರುಪಾವತಿಗಾಗಿ ಫೈನಾನ್ಸ್ ಸಂಸ್ಥೆ ಆ ಹೆಣ್ಣು ಮಗಳಿಗೆ ಕಿರುಕುಳ ನೀಡಿದ್ದು ಇದನ್ನು ಸಹಿಸಲಾರದೆ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ರೈತರಿಗೂ ಕೂಡ ಈ ಸಂಸ್ಥೆಗಳು ಕಿರುಕುಳ ನೀಡುತ್ತಿದೆ. ಆದ್ದರಿಂದ ಈ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ವಹಿಸುವಂತೆ ಅವರು ಒತ್ತಾಯಿಸಿದರು .
ಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಆನಂದ್ ,ಜಿಲ್ಲಾ ಕಾರ್ಯದರ್ಶಿ ಸುರೇಶ್ ಕುಮಾರ್ ,ಮೈಸೂರು ವಿಭಾಗೀಯ ಸಂಚಾಲಕ ಅನಿಲ್ ಕುಮಾರ್ ಸೇರಿದಂತೆ ಇತರರಿದ್ದರು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…