ಮಂಡ್ಯ

ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳಲ್ಲಿ ಅರಿವು ಅವಶ್ಯಕ : ಮಂಜುಳ ಇಟ್ಟಿ

ಮಂಡ್ಯ: ಪೋಕ್ಸೋ ಕಾಯ್ದೆಯ ತಿಳುವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ( ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುಳ ಇಟ್ಟಿ ತಿಳಿಸಿದರು.

ಅವರು ಇಂದು(ಜೂ.28) ಪಿ.ಇ.ಎಸ್. ಕಾಲೇಜಿನ ಕೆ.ವಿ.ಶಂಕರೇಗೌಡ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ (ಪೋಕ್ಸೋ) ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು‌.

ಲೈಂಗಿಕ ಅಪರಾಧದಲ್ಲಿ ಹೆಣ್ಣು ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳು ಸಹ ಬಲಿಪಶುಯಾಗಿರುವ ಪ್ರಕರಣಗಳು ಇವೆ ಆದರಿಂದ ಈ ಕಾಯ್ದೆಯ ಬಗ್ಗೆ ಗಂಡು/ ಹೆಣ್ಣು ಎಂಬ ಬೇದವಿಲ್ಲದೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಎರಡು ಬೇರೆ ಎರಡಕ್ಕೂ ಸಹ ವ್ಯತ್ಯಾಸ ಇದೆ. ಕಾಯ್ದೆಯಲ್ಲಿ ಪ್ರತಿಯೊಂದಕ್ಕೂ ಶಿಕ್ಷೆ ಇದೆ ಎಂದರು.

ಫೇಸ್ ಬುಕ್, ಇನ್ಸಟಾಗ್ರಾಂ ಮುಂತಾದ ಸಾಮಾಜಿಕ ಮಾಧ್ಯಮಗಳ ಮೂಲಕ ಸ್ನೇಹಿತರಾಗಿ ತಮ್ಮ ವೈಯಕ್ತಿಕ ಭಾವಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಹಣದ ಬೇಡಿಕೆ ಇಟ್ಟಾಗ ಮನೆಯಲ್ಲಿ ವಿಷಯ ತಿಳಿಸುವ ದೈರ್ಯ ಮಾಡದೇ ಆತ್ಮಹತ್ಯಗೆ ಒಳಗಾಗಿರುವ ಉದಾಹರಣೆಗಳಿವೆ.
ಮಕ್ಕಳು ತಮ್ಮ ಮೇಲೆ ಲೈಂಗಿಕ ಕಿರುಕುಳವಾಗುತ್ತಿದೆ ಎನ್ನಿಸಿದಾಗ ಅದನ್ನು ವಿರೋಧಿಸಬೇಕು. ಶಿಕ್ಷಕರು ಹಾಗೂ ಪೋಷಕರಿಗೆ ತಿಳಿಸಿ ರಕ್ಷಣೆ ಪಡೆದುಕೊಳ್ಳಬೇಕು. ಮನೆಯಲ್ಲಿ ವಿಷಯ ತಿಳಿಸಲು ಎದರಿ ನೋವನ್ನು ಅನುಭವಿಸುತ್ತ ಆತ್ಮಹತ್ಯೆಯಂತಹ ದಾರಿಯನ್ನು ತುಳಿಯಬಾರದು ಎಂದು ಕಿವಿಮಾತು ಹೇಳಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಉಲ್ಲಂಘಿಸಿದವರಿಗೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚು.‌ ಇದರಿಂದ ಮಕ್ಕಳ ಹಕ್ಕುಗಳ ರಕ್ಷಣೆಗೆ ಮಹತ್ವ ಹೆಚ್ಚಿದೆ ಎಂದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಈ ಹಿಂದೆ ಮಕ್ಕಳು ಮತ್ತು ಮಹಿಳೆಯರಿಗೆ ಪ್ರಮುಖ್ಯತೆ ಇರಲಿಲ್ಲ. ಇಂದಿನ ದಿನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಪೋಕ್ಸೋ ಕಾಯ್ದೆಯಲ್ಲಿ ಅಪರಾಧಿಗಳಿಗೆ ಹೆಚ್ಚಿನ ಪ್ರಮಾಣದ ಶಿಕ್ಷೆ ಇದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎ.ಟಿ.ರಾಜೇಂದ್ರ, ಜನತಾ ಶಿಕ್ಷಣ ಟ್ರಸ್ಟ್ ನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಣ್ಣಮೊಗ ಕೆ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಲಕ್ಷ್ಮಿ ಪ್ರಸನ್ನ, ಮಹೇಶ್ ಎಂ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಎಸ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago