ಮಂಡ್ಯ: 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು.
ಇಂದು ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನ ರಾಮ್ 118ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಬು ಜಗಜೀವನ ರಾಮ್ ಸುದೀರ್ಘ 30 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದರು. ನಂತರ ಭಾರತದ ಉಪ ಪ್ರಧಾನಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ವೃತ್ತಿ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಗೆ ಶೋಷಿತರ ಏಳಿಗೆಗಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.
ಬಾಬು ಜಗಜೀವನ ರಾಂ ಯಾವುದೇ ಸಮಾಜಕ್ಕೆ ಸೀಮಿತವಲ್ಲ ಅವರು ನಮ್ಮ ದೇಶದ ಆಸ್ತಿ, ಸಾರ್ವಕಾಲಕ್ಕೂ ಸರ್ವರೂ ಪ್ರೀತಿಸುವ ನಾಯಕರ ಸಾಲಿನಲ್ಲಿ ಇವರು ಸಹ ಒಬ್ಬರು ಎಂದು ಹೇಳಿದರು.
ಶಾಸಕ ರವಿಕುಮಾರ್ ಅವರು ಮಾತನಾಡಿ, ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ದೇಶದಲ್ಲಿ ಉದ್ಭವಿಸಿದ ಆಹಾರ ಕೊರತೆಯಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾಗ ಆಹಾರ ಧಾನ್ಯಗಳನ್ನು ದೇಶದ ಜನತೆಗೆ ನೀಡಿ ಹಸಿವು ನೀಗಿಸಿದ ಮಹಾನ್ ಚೇತನ ರಾಜಕೀಯ ಮುತ್ಸದ್ದಿ ಬಾಬು ಜಗಜೀವನ ರಾಮ್ ಎಂದು ಹೇಳಿದರು.
ಬಾಬು ಜಗಜೀವನ್ ರಾಮ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚರ್ಚ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜಿನ ಮಕ್ಕಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮೈ ಶುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಮಂಜು, ಡಾ.ಬಾಬು ಜಗಜೀವನ ರಾಮ್ ಸಂಘದ ಜಿಲ್ಲಾಧ್ಯಕ್ಷ ಎನ್.ಆರ್. ಚಂದ್ರ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.
ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ…
ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ…
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…
ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು…
‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…