ಮಂಡ್ಯ

ಬೇಬಿಬೆಟ್ಟಕ್ಕೂ ಮೈಸೂರು ಅರಸರಿಗೂ ಅವಿನಾಭಾವ ಸಂಬಂಧವಿದೆ : ಯದುವೀರ್‌ ಒಡೆಯರ್‌

ಪಾಂಡವಪುರ : ಮೈಸೂರು ಅರಸರಿಗೂ ಬೇಬಿಬೆಟ್ಟಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ತಾಲೂಕಿನ ಬೇಬಿಬೆಟ್ಟದ ಶ್ರೀರಾಮಯೋಗೇಶ್ವರ ಮಠದ ವತಿಯಿಂದ ನಡೆದ ಲಿಂಗೈಕ್ಯ ಮರೀದೇವರು ಶ್ರೀಗಳ 15 ವರ್ಷದ ಪುಣ್ಯಸ್ಮರಣೆ, ಶ್ರೀ ಸದಾಶಿವಸ್ವಾಮೀಜಿಗಳ 5ನೇ ವರ್ಷದ ಪುಣ್ಯಸ್ಮರಣೆ, ಗದ್ದುಗೆ ಉದ್ಘಾಟನೆ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಾತನಾಡಿದ ಅವರು, ನಮ್ಮ ಪೂರ್ವಿಕರು ದ್ವಾರಕದಿಂದ ಮೇಲುಕೋಟೆ ಹಾಗೂ ಬೇಬಿಬೆಟ್ಟಕ್ಕೆ ಬಂದಿದ್ದರು. ಬೇಬಿಬೆಟ್ಟದಲ್ಲಿ ನಡೆಯುವ ದನಗಳ ಜಾತ್ರೆ ವೇಳೆ ನಾನು ಸಹ ಕುಟುಂಬ ಸಮೇತವಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದೇನೆ.

ನಮ್ಮ ಹಾಗೂ ಮಠದ ಸಂಬಂಧ, ಬಾಂಧವ್ಯ ಹೀಗೇ ಮುಂದುವರೆಯಲಿ ಎಂದರು. ಬೇಬಿಬೆಟ್ಟದಲ್ಲಿ ಅಮೃತ ಮಹಲ್‌ ಕಾವಲು ಪ್ರದೇಶದಲ್ಲಿ ಇರುವ ನಮ್ಮ ಸ್ವಲ್ಪ ಜಾಗವನ್ನು ಮಠದ ಅಭಿವೃದ್ಧಿಗೆ ನೀಡುವಂತೆ ಮನವಿ ಮಾಡಿದ್ದೀರಾ. ನಾನು ನಿಮ್ಮ ಮನವಿಯನ್ನು ನಮ್ಮ ತಾಯಿ ಅವರಿಗೆ ಸಲ್ಲಿಸುತ್ತೇನೆ. ಆ ಬಳಿಕ ತಾಯಿ ಅವರ ಸಲಹೆ, ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಬೇಬಿಬೆಟ್ಟಪುಣ್ಯ ಪುರುಷರು ತಪ್ಪಸ್ಸು ಮಾಡಿದ ಪವಿತ್ರ ಸ್ಥಳ. ಮೂರು ದೇವಾಲಯಗಳನ್ನು ಹೊಂದಿರುವ ಧಾರ್ಮಿಕ ಕ್ಷೇತ್ರಗಳ ಪೈಕಿ ಬೇಬಿಬೆಟ್ಟ ಕ್ಷೇತ್ರವೂ ಸಹ ಒಂದಾಗಿದೆ ಎಂದು ಹೇಳಿದರು.

ಮನುಷ್ಯರು ಮಠ, ಮಂದಿರಗಳ ಬಗ್ಗೆ ವಿಶ್ವಾಸ, ನಂಬಿಕೆಗಳನ್ನು ಬೆಳೆಸಿಕೊಳ್ಳಬೇಕು. ಕುಟುಂಬ, ಸಂಸಾರಗಳು ಮನುಷ್ಯನನ್ನು ಜಂಜಾಟದಲ್ಲಿ ಸಿಲುಕಿಸುತ್ತವೆ. ಅದೇ ಮಠ, ಮಂದಿರಗಳು ಮನುಷ್ಯ ಜಂಜಾಟವನ್ನು ಬಿಟ್ಟು ನೆಮ್ಮದಿಯಿಂದ ಜೀವನ ನಡೆಸಲು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತವೆ. ಹಾಗಾಗಿ ಪ್ರತಿಯೊಬ್ಬರು ಮಠಗಳ ಬಗ್ಗೆ ನಂಬಿಕೆ, ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀರಾಮಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ ಮಾತನಾಡಿ, ಬೇಬಿಬೆಟ್ಟ ಪವಿತ್ರವಾದ ತಪೋಭೂಮಿಯಾಗಿದೆ. ಬೇಬಿಬೆಟ್ಟದ ಮಠ 500 ವರ್ಷಗಳ ಇತಿಹಾಸ ಹೊಂದಿದ್ದು ಶ್ರೀಮರೀದೇವರು ಸ್ವಾಮೀಜಿಗಳು ಬರುವ ಮೊದಲು ಹಲವು ಸಿದ್ದಿಪುರುಷರು ಇಲ್ಲಿ ತಪ್ಪಸ್ಸು ಮಾಡಿ ಹೋಗಿದ್ದಾರೆ ಎಂದರು.

ಮೈಸೂರು ಸಂಸ್ಥಾನಕ್ಕೂ ಮಠಕ್ಕೂ ನಂಟಿದೆ. ಮಠದ ಆವರಣದಲ್ಲಿ ಮೊದಲ ಶಾಲೆಯೊಂದು ನಡೆಯುತ್ತಿತ್ತು. ಇದೀಗ ಅದನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲೊಂದು ಶಾಲೆ ತೆರೆಯಬೇಕೆಂದು ಆಲೋಚನೆ ಇದೆ. ಹಾಗಾಗಿ ಮೈಸೂರು ಅರಸುಗಳು ಮಠ ಹೊಂದಿರುವ ಜಾಗ ಹಾಗೂ ಶಾಲೆ ತೆರೆಯಲು ಅನುಕೂಲ ಮಾಡಿಕೊಂಡಬೇಕೆಂದು ಮಠದ ವತಿಯಿಂತಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮನವಿ ಪತ್ರ ನೀಡಿದರು. ಇದಕ್ಕೂ ಮುನ್ನ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀಸದಾಶಿವಸ್ವಾಮೀಜಿಗಳ ಗದ್ದುಗೆಯನ್ನು ಶ್ರೀಸಿದ್ದಲಿಂಗಸ್ವಾಮೀಜಿ, ಸತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉದ್ಘಾಟಿಸಿದರು.

ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀಸಿದ್ದಲಿಂಗಮಹಾಸ್ವಾಮಿ, ಕನಕಪುರದ ದೇಗುಲಮಠ ಮುಮ್ಮಡಿ ನಿರ್ವಾಣಮಹಾಸ್ವಾಮಿಜೀ ಕಲ್ಲುಮಠದ ಮಹಾಂತಸ್ವಾಮೀಜಿ, ಮಂಜುನಾಥ ಶಿವಾಚಾರ್ಯ ಸ್ವಾಮೀಜಿ, ಕರಡಿ ಗವಿಮಠದ ಶಿವಾಶಂಕರಸ್ವಾಮೀಜಿ, ಸದಾಶಿವಸ್ವಾಮೀಜಿ, ರೈತನಾಯಕಿ ಸುನೀತಪುಟ್ಟಣ್ಣಯ್ಯ, ಬಿಜೆಪಿ ಮುಖಂಡ ಡಾ.ಎನ್‌.ಎಸ್‌.ಇಂದ್ರೇಶ್‌, ಎ.ಎಲ್‌.ಕೆಂಪೂಗೌಡ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ, ತಾಲೂಕು ಅಧ್ಯಕ್ಷ ನಿರಂಜನ್‌ಬಾಬು, ಮಾಜಿ ಅಧ್ಯಕ್ಷ ಎಸ್‌.ಮಂಜುನಾಥ್‌, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರಯ್ಯ ಸೇರಿದಂತೆ ವಿವಿಧ ಮಠಾಧೀಶರು, ಭಕ್ತರು, ಮುಖಂಡರು ಹಾಜರಿದ್ದರು.

lokesh

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

38 mins ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

1 hour ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

2 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

2 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

2 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

3 hours ago