ಮಂಡ್ಯ

ಬೇಬಿಬೆಟ್ಟಕ್ಕೂ ಮೈಸೂರು ಅರಸರಿಗೂ ಅವಿನಾಭಾವ ಸಂಬಂಧವಿದೆ : ಯದುವೀರ್‌ ಒಡೆಯರ್‌

ಪಾಂಡವಪುರ : ಮೈಸೂರು ಅರಸರಿಗೂ ಬೇಬಿಬೆಟ್ಟಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ತಾಲೂಕಿನ ಬೇಬಿಬೆಟ್ಟದ ಶ್ರೀರಾಮಯೋಗೇಶ್ವರ ಮಠದ ವತಿಯಿಂದ ನಡೆದ ಲಿಂಗೈಕ್ಯ ಮರೀದೇವರು ಶ್ರೀಗಳ 15 ವರ್ಷದ ಪುಣ್ಯಸ್ಮರಣೆ, ಶ್ರೀ ಸದಾಶಿವಸ್ವಾಮೀಜಿಗಳ 5ನೇ ವರ್ಷದ ಪುಣ್ಯಸ್ಮರಣೆ, ಗದ್ದುಗೆ ಉದ್ಘಾಟನೆ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಾತನಾಡಿದ ಅವರು, ನಮ್ಮ ಪೂರ್ವಿಕರು ದ್ವಾರಕದಿಂದ ಮೇಲುಕೋಟೆ ಹಾಗೂ ಬೇಬಿಬೆಟ್ಟಕ್ಕೆ ಬಂದಿದ್ದರು. ಬೇಬಿಬೆಟ್ಟದಲ್ಲಿ ನಡೆಯುವ ದನಗಳ ಜಾತ್ರೆ ವೇಳೆ ನಾನು ಸಹ ಕುಟುಂಬ ಸಮೇತವಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದೇನೆ.

ನಮ್ಮ ಹಾಗೂ ಮಠದ ಸಂಬಂಧ, ಬಾಂಧವ್ಯ ಹೀಗೇ ಮುಂದುವರೆಯಲಿ ಎಂದರು. ಬೇಬಿಬೆಟ್ಟದಲ್ಲಿ ಅಮೃತ ಮಹಲ್‌ ಕಾವಲು ಪ್ರದೇಶದಲ್ಲಿ ಇರುವ ನಮ್ಮ ಸ್ವಲ್ಪ ಜಾಗವನ್ನು ಮಠದ ಅಭಿವೃದ್ಧಿಗೆ ನೀಡುವಂತೆ ಮನವಿ ಮಾಡಿದ್ದೀರಾ. ನಾನು ನಿಮ್ಮ ಮನವಿಯನ್ನು ನಮ್ಮ ತಾಯಿ ಅವರಿಗೆ ಸಲ್ಲಿಸುತ್ತೇನೆ. ಆ ಬಳಿಕ ತಾಯಿ ಅವರ ಸಲಹೆ, ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಬೇಬಿಬೆಟ್ಟಪುಣ್ಯ ಪುರುಷರು ತಪ್ಪಸ್ಸು ಮಾಡಿದ ಪವಿತ್ರ ಸ್ಥಳ. ಮೂರು ದೇವಾಲಯಗಳನ್ನು ಹೊಂದಿರುವ ಧಾರ್ಮಿಕ ಕ್ಷೇತ್ರಗಳ ಪೈಕಿ ಬೇಬಿಬೆಟ್ಟ ಕ್ಷೇತ್ರವೂ ಸಹ ಒಂದಾಗಿದೆ ಎಂದು ಹೇಳಿದರು.

ಮನುಷ್ಯರು ಮಠ, ಮಂದಿರಗಳ ಬಗ್ಗೆ ವಿಶ್ವಾಸ, ನಂಬಿಕೆಗಳನ್ನು ಬೆಳೆಸಿಕೊಳ್ಳಬೇಕು. ಕುಟುಂಬ, ಸಂಸಾರಗಳು ಮನುಷ್ಯನನ್ನು ಜಂಜಾಟದಲ್ಲಿ ಸಿಲುಕಿಸುತ್ತವೆ. ಅದೇ ಮಠ, ಮಂದಿರಗಳು ಮನುಷ್ಯ ಜಂಜಾಟವನ್ನು ಬಿಟ್ಟು ನೆಮ್ಮದಿಯಿಂದ ಜೀವನ ನಡೆಸಲು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತವೆ. ಹಾಗಾಗಿ ಪ್ರತಿಯೊಬ್ಬರು ಮಠಗಳ ಬಗ್ಗೆ ನಂಬಿಕೆ, ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀರಾಮಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ ಮಾತನಾಡಿ, ಬೇಬಿಬೆಟ್ಟ ಪವಿತ್ರವಾದ ತಪೋಭೂಮಿಯಾಗಿದೆ. ಬೇಬಿಬೆಟ್ಟದ ಮಠ 500 ವರ್ಷಗಳ ಇತಿಹಾಸ ಹೊಂದಿದ್ದು ಶ್ರೀಮರೀದೇವರು ಸ್ವಾಮೀಜಿಗಳು ಬರುವ ಮೊದಲು ಹಲವು ಸಿದ್ದಿಪುರುಷರು ಇಲ್ಲಿ ತಪ್ಪಸ್ಸು ಮಾಡಿ ಹೋಗಿದ್ದಾರೆ ಎಂದರು.

ಮೈಸೂರು ಸಂಸ್ಥಾನಕ್ಕೂ ಮಠಕ್ಕೂ ನಂಟಿದೆ. ಮಠದ ಆವರಣದಲ್ಲಿ ಮೊದಲ ಶಾಲೆಯೊಂದು ನಡೆಯುತ್ತಿತ್ತು. ಇದೀಗ ಅದನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲೊಂದು ಶಾಲೆ ತೆರೆಯಬೇಕೆಂದು ಆಲೋಚನೆ ಇದೆ. ಹಾಗಾಗಿ ಮೈಸೂರು ಅರಸುಗಳು ಮಠ ಹೊಂದಿರುವ ಜಾಗ ಹಾಗೂ ಶಾಲೆ ತೆರೆಯಲು ಅನುಕೂಲ ಮಾಡಿಕೊಂಡಬೇಕೆಂದು ಮಠದ ವತಿಯಿಂತಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮನವಿ ಪತ್ರ ನೀಡಿದರು. ಇದಕ್ಕೂ ಮುನ್ನ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀಸದಾಶಿವಸ್ವಾಮೀಜಿಗಳ ಗದ್ದುಗೆಯನ್ನು ಶ್ರೀಸಿದ್ದಲಿಂಗಸ್ವಾಮೀಜಿ, ಸತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉದ್ಘಾಟಿಸಿದರು.

ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀಸಿದ್ದಲಿಂಗಮಹಾಸ್ವಾಮಿ, ಕನಕಪುರದ ದೇಗುಲಮಠ ಮುಮ್ಮಡಿ ನಿರ್ವಾಣಮಹಾಸ್ವಾಮಿಜೀ ಕಲ್ಲುಮಠದ ಮಹಾಂತಸ್ವಾಮೀಜಿ, ಮಂಜುನಾಥ ಶಿವಾಚಾರ್ಯ ಸ್ವಾಮೀಜಿ, ಕರಡಿ ಗವಿಮಠದ ಶಿವಾಶಂಕರಸ್ವಾಮೀಜಿ, ಸದಾಶಿವಸ್ವಾಮೀಜಿ, ರೈತನಾಯಕಿ ಸುನೀತಪುಟ್ಟಣ್ಣಯ್ಯ, ಬಿಜೆಪಿ ಮುಖಂಡ ಡಾ.ಎನ್‌.ಎಸ್‌.ಇಂದ್ರೇಶ್‌, ಎ.ಎಲ್‌.ಕೆಂಪೂಗೌಡ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ, ತಾಲೂಕು ಅಧ್ಯಕ್ಷ ನಿರಂಜನ್‌ಬಾಬು, ಮಾಜಿ ಅಧ್ಯಕ್ಷ ಎಸ್‌.ಮಂಜುನಾಥ್‌, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರಯ್ಯ ಸೇರಿದಂತೆ ವಿವಿಧ ಮಠಾಧೀಶರು, ಭಕ್ತರು, ಮುಖಂಡರು ಹಾಜರಿದ್ದರು.

lokesh

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

1 hour ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

1 hour ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago