ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್ ನೀಡಿರುವ ಸ್ಪೋಟಕ ಅಂಶ ಬಯಲಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ನೆರವಿನಿಂದ ಅಕ್ರಮ ಗಣಿಗಾರಿಕೆ ನಡೆದಿದೆ. ೨೦೦೩-೪ ನೇ ಸಾಲಿನಿಂದ ೨೦೧೭-೧೮ನೇ ಸಾಲಿನವರೆಗೆ ಅಕ್ರಮ ನಡೆದಿದೆ. ಇನ್ನು ಈ ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ಆರ್ಥಿಕ ನಷ್ಟವಾಗಿದೆ ಎಂದು ಅಧೀಕ್ಷಕರಿಗೆ ಲೋಕಾಯುಕ್ತ ಡಿವೈಎಸ್ ಪಿ ಸಲ್ಲಿಸಿರುವ ವರದಿಯಿಂದ ಬಹಿರಂಗವಾಗಿದೆ.
ಇನ್ನು ಜೂನ್ ೧೫ರಂದು ಸಲ್ಲಿಕೆಯಾಗಿರುವ ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಎಸ್ ಜಿಯಾವುಲ್ಲಾ ಹೆಸರು ಉಲ್ಲೇಖವಾಗಿದೆ. ಮಂಡ್ಯ ಡಿಸಿಯಾಗಿದ್ದ ಜಿಯಾವುಲ್ಲಾ ಪ್ರಸ್ತುತ ಸಿಎಂ ಅಪರ ಕಾರ್ಯದರ್ಶಿಯಾಗಿದ್ದಾರೆ. ೧೨ ಅಧಿಕಾರಿಗಳು ಕರ್ತವ್ಯ ಲೋಪವೆಸಗಿರುವ ಬಗ್ಗೆ ವರದಿಯಲ್ಲಿ ಬಿಡಿ ಬಿಡಿಯಾಗಿ ತಿಳಿಸಲಾಗಿದೆ.
ಇದೀಗ ದೂರುದಾರ ಕೆ.ಆರ್ ರವೀಂದ್ರ ಲೋಕಾಯುಕ್ತ ಡಿವೈಎಸ್ ಪಿ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ಎಸ್ ಐಟಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…