ಮಂಡ್ಯ

ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ; ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್‌ ನೀಡಿರುವ ಸ್ಪೋಟಕ ಅಂಶ ಬಯಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ನೆರವಿನಿಂದ ಅಕ್ರಮ ಗಣಿಗಾರಿಕೆ ನಡೆದಿದೆ. ೨೦೦೩-೪ ನೇ ಸಾಲಿನಿಂದ ೨೦೧೭-೧೮ನೇ ಸಾಲಿನವರೆಗೆ ಅಕ್ರಮ ನಡೆದಿದೆ. ಇನ್ನು ಈ ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ಆರ್ಥಿಕ ನಷ್ಟವಾಗಿದೆ ಎಂದು ಅಧೀಕ್ಷಕರಿಗೆ ಲೋಕಾಯುಕ್ತ ಡಿವೈಎಸ್‌ ಪಿ ಸಲ್ಲಿಸಿರುವ ವರದಿಯಿಂದ ಬಹಿರಂಗವಾಗಿದೆ.

ಇನ್ನು ಜೂನ್‌ ೧೫ರಂದು ಸಲ್ಲಿಕೆಯಾಗಿರುವ ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಎಸ್‌ ಜಿಯಾವುಲ್ಲಾ ಹೆಸರು ಉಲ್ಲೇಖವಾಗಿದೆ. ಮಂಡ್ಯ ಡಿಸಿಯಾಗಿದ್ದ ಜಿಯಾವುಲ್ಲಾ ಪ್ರಸ್ತುತ ಸಿಎಂ ಅಪರ ಕಾರ್ಯದರ್ಶಿಯಾಗಿದ್ದಾರೆ. ೧೨ ಅಧಿಕಾರಿಗಳು ಕರ್ತವ್ಯ ಲೋಪವೆಸಗಿರುವ ಬಗ್ಗೆ ವರದಿಯಲ್ಲಿ ಬಿಡಿ ಬಿಡಿಯಾಗಿ ತಿಳಿಸಲಾಗಿದೆ.

ಇದೀಗ ದೂರುದಾರ ಕೆ.ಆರ್‌ ರವೀಂದ್ರ ಲೋಕಾಯುಕ್ತ ಡಿವೈಎಸ್‌ ಪಿ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ಎಸ್‌ ಐಟಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago