ಮಂಡ್ಯ: ಕೆಆರ್ಎಸ್ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆ ಇಂದು(ಜು.29) ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ.
ಬಾಗಿನ ಅರ್ಪಿಸಲು ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಒಂದೇ ಬಸ್ಸಿನಲ್ಲಿ ಕೆಆರ್ಎಸ್ಗೆ ಆಗಮಿಸಿದರು.
ಕೆಆರ್ಎಸ್ ಮುಖ್ಯ ದ್ವಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸಿಎಂ ಹಾಗೂ ಸಚಿವರಿಗೆ ಮಂಡ್ಯ ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಭೂತಪೂರ್ವ ಸ್ವಾಗತ ಕೋರಲಾಯಿತು.
ಕೆಆರ್ಎಸ್ ಮುಖ್ಯ ದ್ವಾರದಿಂದ ಕಾಲ್ನಡಿಯಲ್ಲೇ ಬಾಗಿನ ಸಲ್ಲಿಸಲು ಆಗಮಿಸಿದ ಸಿಎಂ ಹಾಗೂ ಸಚಿವರುಗಳಿಗೆ ಡೊಳ್ಳು ಕುಣಿತ, ಜಾನಪದ ಕಲಾತಂಡಗಳು ಸ್ವಾಗತ ಕೋರಿದವು.
ಬಳಿಕ ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಹರೀಶ್ ಗೌಡ, ತನ್ವೀರ್ ಸೇಠ್, ಡಿ. ರವಿಶಂಕರ್ ಮತ್ತಿತರರ ಸಾಥ್ ನೀಡಿದರು.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…