ಮಂಡ್ಯ: ಕೆಆರ್ಎಸ್ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆ ಇಂದು(ಜು.29) ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ.
ಬಾಗಿನ ಅರ್ಪಿಸಲು ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಒಂದೇ ಬಸ್ಸಿನಲ್ಲಿ ಕೆಆರ್ಎಸ್ಗೆ ಆಗಮಿಸಿದರು.
ಕೆಆರ್ಎಸ್ ಮುಖ್ಯ ದ್ವಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸಿಎಂ ಹಾಗೂ ಸಚಿವರಿಗೆ ಮಂಡ್ಯ ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಭೂತಪೂರ್ವ ಸ್ವಾಗತ ಕೋರಲಾಯಿತು.
ಕೆಆರ್ಎಸ್ ಮುಖ್ಯ ದ್ವಾರದಿಂದ ಕಾಲ್ನಡಿಯಲ್ಲೇ ಬಾಗಿನ ಸಲ್ಲಿಸಲು ಆಗಮಿಸಿದ ಸಿಎಂ ಹಾಗೂ ಸಚಿವರುಗಳಿಗೆ ಡೊಳ್ಳು ಕುಣಿತ, ಜಾನಪದ ಕಲಾತಂಡಗಳು ಸ್ವಾಗತ ಕೋರಿದವು.
ಬಳಿಕ ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಹರೀಶ್ ಗೌಡ, ತನ್ವೀರ್ ಸೇಠ್, ಡಿ. ರವಿಶಂಕರ್ ಮತ್ತಿತರರ ಸಾಥ್ ನೀಡಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…