ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ
ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ – ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಂಗಳವಾರ ಚಾಲನೆ ನೀಡಿದರು.
ಪಾಂಡವಪುರದ ಸಹಕಾರ ಸಕ್ಕರೆ ಕಾರ್ಖಾನೆ ಮುಂಭಾಗ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಬನಘಟ್ಟ – ಕಿರಂಗೂರು ರಸ್ತೆಯನ್ನು 30 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸರ್ಕಾರ ತಿರ್ಮಾನಿಸಿದೆ. ಬಹಳ ವರ್ಷಗಳಿಂದ ಹದಗೆಟ್ಟಿದ್ದ ಬನಘಟ್ಟ – ಕಿರಂಗೂರು ರಸ್ತೆಯಲ್ಲಿ ಜನ ಸಾಮನ್ಯರು ಇದುವರೆಗೂ ಅನುಭವಿಸುತ್ತಿದ್ದ ಟ್ರಾಫಿಕ್ ಸಮಸ್ಯೆ ಹಾಗೂ ಅಪಘಾತಗಳನ್ನು ತಪ್ಪಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರ ಹೆಚ್ಚಿರುತ್ತದೆ ಹಾಗಾಗಿ ಉತ್ತಮ ರಸ್ತೆ ನಿರ್ಮಾಣ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ ಬನಘಟ್ಟದಿಂದ ಕಿರಂಗೂರು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರವು ಗುಣಮಟ್ಟದ ರಸ್ತೆ ಕಾಮಗಾರಿಗೆ 30 ಕೋಟಿ ರೂ ಅನುಮೋದನೆ ನೀಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…