ಮಂಡ್ಯ

ಬ್ಯಾಂಕುಗಳು ರೈತರ ಜತೆ ಸೌಜನ್ಯದಿಂದ ವರ್ತಿಸಬೇಕು : ಎಚ್‌ಡಿಕೆ

ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.

ನಗರದಲ್ಲಿ ನಡೆದ ಜಿಲ್ಲಾ ಬ್ಯಾಂಕರ್‌ಗಳ ಸಭೆಯಲ್ಲಿ ಆನ್‌ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಹೆಚ್ಚು ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.

ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ೨೦೨೫-೨೬ರವರೆಗೆ ಶೇ.೭೭.೭೧ರಷ್ಟು ಹಣವನ್ನು ಕೃಷಿ ಕ್ಷೇತ್ರಕ್ಕೆ ಮೀಸಲು, ಸಣ್ಣ ಕೈಗಾರಿಕೆಗಳಿಗೆ ಶೇ. ೧೧ರಷ್ಟು ಮೀಸಲು ಇಡಲಾಗಿದೆ. ಒಟ್ಟು ಜಿಲ್ಲೆಯ ಯೋಜನೆಗೆ ೧೨೪೯೪.೭೪ ಕೋಟಿ ರೂ.ಗಳನ್ನು ಕ್ರೆಡಿಟ್ ಮಾಡಿಕೊಂಡಿದ್ದೇವೆ. ನೀವು ನೀಡಿರುವ ನಿರ್ದೇಶನ ಮತ್ತು ಅಂಶಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ತಮಗೆ ಮಾಹಿತಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್‌ಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

11 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago