"Banks should treat farmers with courtesy: HDK"
ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.
ನಗರದಲ್ಲಿ ನಡೆದ ಜಿಲ್ಲಾ ಬ್ಯಾಂಕರ್ಗಳ ಸಭೆಯಲ್ಲಿ ಆನ್ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಹೆಚ್ಚು ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.
ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ೨೦೨೫-೨೬ರವರೆಗೆ ಶೇ.೭೭.೭೧ರಷ್ಟು ಹಣವನ್ನು ಕೃಷಿ ಕ್ಷೇತ್ರಕ್ಕೆ ಮೀಸಲು, ಸಣ್ಣ ಕೈಗಾರಿಕೆಗಳಿಗೆ ಶೇ. ೧೧ರಷ್ಟು ಮೀಸಲು ಇಡಲಾಗಿದೆ. ಒಟ್ಟು ಜಿಲ್ಲೆಯ ಯೋಜನೆಗೆ ೧೨೪೯೪.೭೪ ಕೋಟಿ ರೂ.ಗಳನ್ನು ಕ್ರೆಡಿಟ್ ಮಾಡಿಕೊಂಡಿದ್ದೇವೆ. ನೀವು ನೀಡಿರುವ ನಿರ್ದೇಶನ ಮತ್ತು ಅಂಶಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ತಮಗೆ ಮಾಹಿತಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದರು.
ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…