ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ನಿವಾಸಿ ಡಿ.ಧನಂಜಯ (ಬಾಲು) ಹಾಗೂ ಡಿ.ಉಮೇಶ್ ಎಂಬುವರಿಗೆ ಸೇರಿದ ಆಲೆಮನೆ ಬೆಂಕಿಗಾಹುತಿಯಾಗಿದೆ. ದೇವೇಗೌಡನಕೊಪ್ಪಲು ಹೊರವಲಯದಲ್ಲಿರುವ ಆಲೆಮನೆಗೆ ಸೋಮವಾರ ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಬೆಂಕಿ ಆವರಿಸಿ ಒಂದು ನಾಟಿ ಹಸು, ಎರಡು ನಾಟಿ ಕರುಗಳು ಹಾಗೂ ಮೇಕೆಯೊಂದು ಸಾವನ್ನಪ್ಪಿವೆ. ಆಲೆಮನೆ ಬಳಿ ನಿಲ್ಲಿಸಿದ ಟ್ರ್ಯಾ ಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ಮನೆ ಕಟ್ಟುವ ಸಲುವಾಗಿ ಆಲೆಮನೆಯೊಳಗೆ ಜೋಡಿಸಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ತೇಗದ ಮರಗಳು ಕೂಡ ಬೆಂಕಿಗಾಹುತಿಯಾಗಿವೆ.
ಮೊದಲಿಗೆ ಕಬ್ಬಿನ ರಚ್ಚಿಗೆ ಬೆಂಕಿ ಬಿದ್ದಿದೆ. ನಂತರ ಬೆಂಕಿ ಆಲೆಮನೆಗೆ ವ್ಯಾಪಿಸಿ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣವೇ ಕಾರ್ಮಿಕರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಅಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ಸಂಪೂರ್ಣ ಬೆಂಕಿ ಆಲೆಮನೆಗೆ ವ್ಯಾಪಿಸಿದ್ದರಿಂದ 10 ಲಕ್ಷ ರೂ. ನಷ್ಟವಾಗಿದೆ.
ಶಾಸಕ ದರ್ಶನ್ ಭೇಟಿ : ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಒಂದು ನಾಟಿ ಹಸು ಹಾಗೂ ಎರಡು ನಾಟಿ ಕರುಗಳು ಸಾವನ್ನಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರಲ್ಲದೆ, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಆಲೆಮನೆಯ ಮಾಲೀಕರಾದ ಧನಂಜಯ ಹಾಗೂ ಉಮೇಶ್ ಅವರಿಗೆ ಭರವಸೆ ನೀಡಿದರು.
ಅಧಿಕಾರಿಗಳ ಭೇಟಿ : ಘಟನಾ ಸ್ಥಳಕ್ಕೆ ತಹಸಿಲ್ದಾರ್ ಎಸ್.ಸಂತೋಷ್, ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಆರ್.ತ್ಯಾಗರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಹಿಮಾಚಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…