ಮಂಡ್ಯ

ಆಲೆಮನೆಗೆ ಬೆಂಕಿ : ಜಾನುವಾರುಗಳು ಸಜೀವ ದಹನ

ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಿವಾಸಿ ಡಿ.ಧನಂಜಯ (ಬಾಲು) ಹಾಗೂ ಡಿ.ಉಮೇಶ್ ಎಂಬುವರಿಗೆ ಸೇರಿದ ಆಲೆಮನೆ ಬೆಂಕಿಗಾಹುತಿಯಾಗಿದೆ. ದೇವೇಗೌಡನಕೊಪ್ಪಲು ಹೊರವಲಯದಲ್ಲಿರುವ ಆಲೆಮನೆಗೆ ಸೋಮವಾರ ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಬೆಂಕಿ ಆವರಿಸಿ ಒಂದು ನಾಟಿ ಹಸು, ಎರಡು ನಾಟಿ ಕರುಗಳು ಹಾಗೂ ಮೇಕೆಯೊಂದು ಸಾವನ್ನಪ್ಪಿವೆ. ಆಲೆಮನೆ ಬಳಿ ನಿಲ್ಲಿಸಿದ ಟ್ರ್ಯಾ ಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ಮನೆ ಕಟ್ಟುವ ಸಲುವಾಗಿ ಆಲೆಮನೆಯೊಳಗೆ ಜೋಡಿಸಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ತೇಗದ ಮರಗಳು ಕೂಡ ಬೆಂಕಿಗಾಹುತಿಯಾಗಿವೆ.

ಮೊದಲಿಗೆ ಕಬ್ಬಿನ ರಚ್ಚಿಗೆ ಬೆಂಕಿ ಬಿದ್ದಿದೆ. ನಂತರ ಬೆಂಕಿ ಆಲೆಮನೆಗೆ ವ್ಯಾಪಿಸಿ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣವೇ ಕಾರ್ಮಿಕರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಅಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ಸಂಪೂರ್ಣ ಬೆಂಕಿ ಆಲೆಮನೆಗೆ ವ್ಯಾಪಿಸಿದ್ದರಿಂದ 10 ಲಕ್ಷ ರೂ. ನಷ್ಟವಾಗಿದೆ.

ಶಾಸಕ ದರ್ಶನ್ ಭೇಟಿ : ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಒಂದು ನಾಟಿ ಹಸು ಹಾಗೂ ಎರಡು ನಾಟಿ ಕರುಗಳು ಸಾವನ್ನಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರಲ್ಲದೆ, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಆಲೆಮನೆಯ ಮಾಲೀಕರಾದ ಧನಂಜಯ ಹಾಗೂ ಉಮೇಶ್ ಅವರಿಗೆ ಭರವಸೆ ನೀಡಿದರು.

ಅಧಿಕಾರಿಗಳ ಭೇಟಿ : ಘಟನಾ ಸ್ಥಳಕ್ಕೆ ತಹಸಿಲ್ದಾರ್ ಎಸ್.ಸಂತೋಷ್, ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಆರ್.ತ್ಯಾಗರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಹಿಮಾಚಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago