ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ನಿವಾಸಿ ಡಿ.ಧನಂಜಯ (ಬಾಲು) ಹಾಗೂ ಡಿ.ಉಮೇಶ್ ಎಂಬುವರಿಗೆ ಸೇರಿದ ಆಲೆಮನೆ ಬೆಂಕಿಗಾಹುತಿಯಾಗಿದೆ. ದೇವೇಗೌಡನಕೊಪ್ಪಲು ಹೊರವಲಯದಲ್ಲಿರುವ ಆಲೆಮನೆಗೆ ಸೋಮವಾರ ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಬೆಂಕಿ ಆವರಿಸಿ ಒಂದು ನಾಟಿ ಹಸು, ಎರಡು ನಾಟಿ ಕರುಗಳು ಹಾಗೂ ಮೇಕೆಯೊಂದು ಸಾವನ್ನಪ್ಪಿವೆ. ಆಲೆಮನೆ ಬಳಿ ನಿಲ್ಲಿಸಿದ ಟ್ರ್ಯಾ ಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ಮನೆ ಕಟ್ಟುವ ಸಲುವಾಗಿ ಆಲೆಮನೆಯೊಳಗೆ ಜೋಡಿಸಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ತೇಗದ ಮರಗಳು ಕೂಡ ಬೆಂಕಿಗಾಹುತಿಯಾಗಿವೆ.
ಮೊದಲಿಗೆ ಕಬ್ಬಿನ ರಚ್ಚಿಗೆ ಬೆಂಕಿ ಬಿದ್ದಿದೆ. ನಂತರ ಬೆಂಕಿ ಆಲೆಮನೆಗೆ ವ್ಯಾಪಿಸಿ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣವೇ ಕಾರ್ಮಿಕರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಅಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ಸಂಪೂರ್ಣ ಬೆಂಕಿ ಆಲೆಮನೆಗೆ ವ್ಯಾಪಿಸಿದ್ದರಿಂದ 10 ಲಕ್ಷ ರೂ. ನಷ್ಟವಾಗಿದೆ.
ಶಾಸಕ ದರ್ಶನ್ ಭೇಟಿ : ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಒಂದು ನಾಟಿ ಹಸು ಹಾಗೂ ಎರಡು ನಾಟಿ ಕರುಗಳು ಸಾವನ್ನಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರಲ್ಲದೆ, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಆಲೆಮನೆಯ ಮಾಲೀಕರಾದ ಧನಂಜಯ ಹಾಗೂ ಉಮೇಶ್ ಅವರಿಗೆ ಭರವಸೆ ನೀಡಿದರು.
ಅಧಿಕಾರಿಗಳ ಭೇಟಿ : ಘಟನಾ ಸ್ಥಳಕ್ಕೆ ತಹಸಿಲ್ದಾರ್ ಎಸ್.ಸಂತೋಷ್, ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಆರ್.ತ್ಯಾಗರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಹಿಮಾಚಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…