ಪಾಂಡವಪುರ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಆಲೆಮನೆಯೊಂದು ಹೊತ್ತಿ ಉರಿದು ಬೆಲೆ ಬಾಳುವ ನಾಟಿ ಹಸು, ಕರು, ಮೇಕೆ ಸಾವನ್ನಪ್ಪಿ, ಟ್ರ್ಯಾ ಕ್ಟರ್ ಸುಟ್ಟು ಕರಕಲಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ನಿವಾಸಿ ಡಿ.ಧನಂಜಯ (ಬಾಲು) ಹಾಗೂ ಡಿ.ಉಮೇಶ್ ಎಂಬುವರಿಗೆ ಸೇರಿದ ಆಲೆಮನೆ ಬೆಂಕಿಗಾಹುತಿಯಾಗಿದೆ. ದೇವೇಗೌಡನಕೊಪ್ಪಲು ಹೊರವಲಯದಲ್ಲಿರುವ ಆಲೆಮನೆಗೆ ಸೋಮವಾರ ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಬೆಂಕಿ ಆವರಿಸಿ ಒಂದು ನಾಟಿ ಹಸು, ಎರಡು ನಾಟಿ ಕರುಗಳು ಹಾಗೂ ಮೇಕೆಯೊಂದು ಸಾವನ್ನಪ್ಪಿವೆ. ಆಲೆಮನೆ ಬಳಿ ನಿಲ್ಲಿಸಿದ ಟ್ರ್ಯಾ ಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ಮನೆ ಕಟ್ಟುವ ಸಲುವಾಗಿ ಆಲೆಮನೆಯೊಳಗೆ ಜೋಡಿಸಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ತೇಗದ ಮರಗಳು ಕೂಡ ಬೆಂಕಿಗಾಹುತಿಯಾಗಿವೆ.
ಮೊದಲಿಗೆ ಕಬ್ಬಿನ ರಚ್ಚಿಗೆ ಬೆಂಕಿ ಬಿದ್ದಿದೆ. ನಂತರ ಬೆಂಕಿ ಆಲೆಮನೆಗೆ ವ್ಯಾಪಿಸಿ ಧಗ ಧಗನೆ ಹೊತ್ತಿ ಉರಿದಿದೆ. ತಕ್ಷಣವೇ ಕಾರ್ಮಿಕರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಅಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ಸಂಪೂರ್ಣ ಬೆಂಕಿ ಆಲೆಮನೆಗೆ ವ್ಯಾಪಿಸಿದ್ದರಿಂದ 10 ಲಕ್ಷ ರೂ. ನಷ್ಟವಾಗಿದೆ.
ಶಾಸಕ ದರ್ಶನ್ ಭೇಟಿ : ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಒಂದು ನಾಟಿ ಹಸು ಹಾಗೂ ಎರಡು ನಾಟಿ ಕರುಗಳು ಸಾವನ್ನಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರಲ್ಲದೆ, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಆಲೆಮನೆಯ ಮಾಲೀಕರಾದ ಧನಂಜಯ ಹಾಗೂ ಉಮೇಶ್ ಅವರಿಗೆ ಭರವಸೆ ನೀಡಿದರು.
ಅಧಿಕಾರಿಗಳ ಭೇಟಿ : ಘಟನಾ ಸ್ಥಳಕ್ಕೆ ತಹಸಿಲ್ದಾರ್ ಎಸ್.ಸಂತೋಷ್, ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಆರ್.ತ್ಯಾಗರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಹಿಮಾಚಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…