ಮಂಡ್ಯ: ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಗ್ರಾಮಸ್ಥರು 80 ವರ್ಷಗಳಿಂದ ಓಡಾಟ ನಡೆಸುತ್ತಿದ್ದಾರೆ ಎಂದರು.
ಒಂದು ವಾರದ ಹಿಂದೆ ಕೆಂಚನಹಳ್ಳಿ ಗ್ರಾಮದ ಗೂಳಿಗೌಡರ ಮಕ್ಕಳಾದ ಪುಟ್ಟೇಗೌಡ ,ಕೃಷ್ಣ ,ಬಸವರಾಜು ಅವರ ತಾಯಿಯ ಹೆಸರಿನಲ್ಲಿರುವ ಸರ್ವೆ ನಂಬರ್ 376 ರಲ್ಲಿರುವ 20 ಗುಂಟೆ ಜಮೀನಿನ ಪಕ್ಕದಲ್ಲಿ ಚಿಕ್ಕದಾಸೇಗೌಡ ಅವರ ಹೆಸರಿನಲ್ಲಿ ಸರ್ವೇ ನಂಬರ್ 375 ಒಂದು ಬಿ ನಲ್ಲಿ ಎರಡು ಗುಂಟೆ ಕರಾಬು ಜಮೀನಿದೆ. ಸದರಿ ಜಮೀನು ಅವರ ಮಗನಾದ ಪುಟ್ಟಸ್ವಾಮಿ ಅವರ ಹೆಸರಿನಲ್ಲಿ ನಮೂದಾಗಿದೆ ಎಂದರು .
ಪ್ರಸ್ತುತ ಕೆಂಚನಹಳ್ಳಿ ಗ್ರಾಮದ ಚೆನ್ನಮ್ಮ ಅವರ ಮಕ್ಕಳಾದ ಪುಟ್ಟೇಗೌಡ, ಕೃಷ್ಣ, ಬಸವರಾಜು ಅವರು ಹಾಲಿನಿಂದ ರಸ್ತೆಯನ್ನು ಮುಚ್ಚಿ ಚಿಕ್ಕದಾಸಗೌಡರ ಜಮೀನಿನಲ್ಲಿ ರಸ್ತೆ ಮಾಡಲು ಹೊರಟಿದ್ದಾರೆ .ಆದ್ದರಿಂದ ಮುಚ್ಚಿರುವ ಹಳೆಯ ರಸ್ತೆಯನ್ನು ತೆರೆವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜವರಯ್ಯ ,ಸೋಮಶೇಖರ, ರುದ್ರೇಶ ಸೇರಿದಂತೆ ಇತರರಿದ್ದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…