ಮಂಡ್ಯ: ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಗ್ರಾಮಸ್ಥರು 80 ವರ್ಷಗಳಿಂದ ಓಡಾಟ ನಡೆಸುತ್ತಿದ್ದಾರೆ ಎಂದರು.
ಒಂದು ವಾರದ ಹಿಂದೆ ಕೆಂಚನಹಳ್ಳಿ ಗ್ರಾಮದ ಗೂಳಿಗೌಡರ ಮಕ್ಕಳಾದ ಪುಟ್ಟೇಗೌಡ ,ಕೃಷ್ಣ ,ಬಸವರಾಜು ಅವರ ತಾಯಿಯ ಹೆಸರಿನಲ್ಲಿರುವ ಸರ್ವೆ ನಂಬರ್ 376 ರಲ್ಲಿರುವ 20 ಗುಂಟೆ ಜಮೀನಿನ ಪಕ್ಕದಲ್ಲಿ ಚಿಕ್ಕದಾಸೇಗೌಡ ಅವರ ಹೆಸರಿನಲ್ಲಿ ಸರ್ವೇ ನಂಬರ್ 375 ಒಂದು ಬಿ ನಲ್ಲಿ ಎರಡು ಗುಂಟೆ ಕರಾಬು ಜಮೀನಿದೆ. ಸದರಿ ಜಮೀನು ಅವರ ಮಗನಾದ ಪುಟ್ಟಸ್ವಾಮಿ ಅವರ ಹೆಸರಿನಲ್ಲಿ ನಮೂದಾಗಿದೆ ಎಂದರು .
ಪ್ರಸ್ತುತ ಕೆಂಚನಹಳ್ಳಿ ಗ್ರಾಮದ ಚೆನ್ನಮ್ಮ ಅವರ ಮಕ್ಕಳಾದ ಪುಟ್ಟೇಗೌಡ, ಕೃಷ್ಣ, ಬಸವರಾಜು ಅವರು ಹಾಲಿನಿಂದ ರಸ್ತೆಯನ್ನು ಮುಚ್ಚಿ ಚಿಕ್ಕದಾಸಗೌಡರ ಜಮೀನಿನಲ್ಲಿ ರಸ್ತೆ ಮಾಡಲು ಹೊರಟಿದ್ದಾರೆ .ಆದ್ದರಿಂದ ಮುಚ್ಚಿರುವ ಹಳೆಯ ರಸ್ತೆಯನ್ನು ತೆರೆವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜವರಯ್ಯ ,ಸೋಮಶೇಖರ, ರುದ್ರೇಶ ಸೇರಿದಂತೆ ಇತರರಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…