ಮಂಡ್ಯ

ಬಸರಾಳು: ದೇವಸ್ಥಾನದ ರಸ್ತೆ ತೆರವಿಗೆ ಒತ್ತಾಯ

ಮಂಡ್ಯ:  ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಗ್ರಾಮಸ್ಥರು 80 ವರ್ಷಗಳಿಂದ ಓಡಾಟ ನಡೆಸುತ್ತಿದ್ದಾರೆ ಎಂದರು.

ಒಂದು ವಾರದ ಹಿಂದೆ ಕೆಂಚನಹಳ್ಳಿ ಗ್ರಾಮದ ಗೂಳಿಗೌಡರ ಮಕ್ಕಳಾದ ಪುಟ್ಟೇಗೌಡ ,ಕೃಷ್ಣ ,ಬಸವರಾಜು ಅವರ ತಾಯಿಯ ಹೆಸರಿನಲ್ಲಿರುವ ಸರ್ವೆ ನಂಬರ್ 376 ರಲ್ಲಿರುವ 20 ಗುಂಟೆ ಜಮೀನಿನ ಪಕ್ಕದಲ್ಲಿ ಚಿಕ್ಕದಾಸೇಗೌಡ ಅವರ ಹೆಸರಿನಲ್ಲಿ ಸರ್ವೇ ನಂಬರ್ 375 ಒಂದು ಬಿ ನಲ್ಲಿ ಎರಡು ಗುಂಟೆ ಕರಾಬು ಜಮೀನಿದೆ. ಸದರಿ ಜಮೀನು ಅವರ ಮಗನಾದ ಪುಟ್ಟಸ್ವಾಮಿ ಅವರ ಹೆಸರಿನಲ್ಲಿ ನಮೂದಾಗಿದೆ ಎಂದರು .

ಪ್ರಸ್ತುತ ಕೆಂಚನಹಳ್ಳಿ ಗ್ರಾಮದ ಚೆನ್ನಮ್ಮ ಅವರ ಮಕ್ಕಳಾದ ಪುಟ್ಟೇಗೌಡ, ಕೃಷ್ಣ, ಬಸವರಾಜು ಅವರು ಹಾಲಿನಿಂದ ರಸ್ತೆಯನ್ನು ಮುಚ್ಚಿ ಚಿಕ್ಕದಾಸಗೌಡರ ಜಮೀನಿನಲ್ಲಿ ರಸ್ತೆ ಮಾಡಲು ಹೊರಟಿದ್ದಾರೆ .ಆದ್ದರಿಂದ ಮುಚ್ಚಿರುವ ಹಳೆಯ ರಸ್ತೆಯನ್ನು ತೆರೆವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಜವರಯ್ಯ ,ಸೋಮಶೇಖರ, ರುದ್ರೇಶ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago