ಮಂಡ್ಯ

ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ, ಚಿಂತನೆ ಅಳವಡಿಸಿಕೊಳ್ಳಿ: ಡಾ.ಕುಮಾರ

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಬಸವಣ್ಣ ಮತ್ತು ಹೇಮರೆಡ್ಡಿ ಮಲ್ಲಮ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಜ್ಞಾನ ಭಂಡಾರ ವಿದ್ದಂತೆ. ಪ್ರತಿ ಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಬಸವಣ್ಣನವರ ವಚನಗಳನ್ನು ತಿಳಿಸಿ, ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದರು.

ಬಸವಣ್ಣನವರು 12 ಶತಮಾನದಲ್ಲಿ ತಲೆದೂರಿದ್ದ ಜಾತಿ ಪದ್ಧತಿಯನ್ನು ವಿರೋಧಿಸಿ, ಈ ಜಾತಿ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಟೊಂಕ ಕಟ್ಟಿ ನಿಂತಿದ್ದರು. ವಚನಗಳ ಮೂಲಕ ಪ್ರತಿಯೊಬ್ಬರಿಗೂ ವಿಚಾರ ವಿನಿಮಯ ಮಾಡಿ ಸಮಾಜದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಿಸಿ ಜ್ಞಾನ ಮತ್ತು ಅನ್ನ ದಾಸೋಹ ನಡೆಸುವುದರ ಜೊತೆಗೆ ಜನರಿಗೆ ಅರ್ಥವಾಗುವ ಸರಳವಾದ ವಚನಗಳ ಮೂಲಕ ಜೀವನದ ಸಂದೇಶಗಳನ್ನು ನೀಡಿದರು. ಅವರು ನೀಡಿರುವ ವಚನಗಳು ಇಂದಿಗೂ ಪ್ರಸ್ತುತ ಎಂದು ಪ್ರತಿಪಾದಿಸಿದರು.

ಬಸವಣ್ಣನವರ ನುಡಿಯಂತೆ ದೇಹವೇ ದೇಗುಲ, ಶಿರವೇ ಕಳಸ ಎಂಬುದನ್ನು ಪಾಲಿಸಬೇಕು, ಮಾನವೀಯತೆ ಗಿಂತ ದೊಡ್ಡದ್ದು ಯಾವುದು ಇಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದವರು ಬಸವಣ್ಣ. ಇವರ ವಚನಗಳು ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ ಜಗತ್ತಿನಾದ್ಯಂತ ವಿಸ್ತಾರವಾಗಿವೆ ಎಂದರು.

ಮಹಾ ಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು ಸಾಂಪ್ರದಾಯಿಕ ಕುಟುಂಬದಲ್ಲಿ ಜನಿಸಿ ಮದುವೆ ಆದ ನಂತರ ತನ್ನ ಸಂಸಾರದಲ್ಲಿ ಅಥವಾ ಸುತ್ತಮುತ್ತ ಪರಿಸರದಲ್ಲಿ ಕಂಡಂತಹ ತೊಡಕು ಮತ್ತು ಸಮಸ್ಯೆಗಳನ್ನು ಆಧ್ಯಾತ್ಮಿಕ ನೆಲಗಟ್ಟೆಯಲ್ಲೆ ಮನ ಪರಿವರ್ತನೆ ಮಾಡುತ್ತಿದ್ದರು, ಸ್ವತಃ ಆಕೆಯ ಕುಟುಂಬದಲ್ಲಿ ಇದ್ದಂತಹ ಮೈದುನನ ಮನ ಪರಿವರ್ತನೆ ಮಾಡಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಮ್ ಬಾಬು ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

33 mins ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

48 mins ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

49 mins ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

50 mins ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

51 mins ago