ಮಂಡ್ಯ

ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ, ಚಿಂತನೆ ಅಳವಡಿಸಿಕೊಳ್ಳಿ: ಡಾ.ಕುಮಾರ

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಬಸವಣ್ಣ ಮತ್ತು ಹೇಮರೆಡ್ಡಿ ಮಲ್ಲಮ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಜ್ಞಾನ ಭಂಡಾರ ವಿದ್ದಂತೆ. ಪ್ರತಿ ಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಬಸವಣ್ಣನವರ ವಚನಗಳನ್ನು ತಿಳಿಸಿ, ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದರು.

ಬಸವಣ್ಣನವರು 12 ಶತಮಾನದಲ್ಲಿ ತಲೆದೂರಿದ್ದ ಜಾತಿ ಪದ್ಧತಿಯನ್ನು ವಿರೋಧಿಸಿ, ಈ ಜಾತಿ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಟೊಂಕ ಕಟ್ಟಿ ನಿಂತಿದ್ದರು. ವಚನಗಳ ಮೂಲಕ ಪ್ರತಿಯೊಬ್ಬರಿಗೂ ವಿಚಾರ ವಿನಿಮಯ ಮಾಡಿ ಸಮಾಜದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಿಸಿ ಜ್ಞಾನ ಮತ್ತು ಅನ್ನ ದಾಸೋಹ ನಡೆಸುವುದರ ಜೊತೆಗೆ ಜನರಿಗೆ ಅರ್ಥವಾಗುವ ಸರಳವಾದ ವಚನಗಳ ಮೂಲಕ ಜೀವನದ ಸಂದೇಶಗಳನ್ನು ನೀಡಿದರು. ಅವರು ನೀಡಿರುವ ವಚನಗಳು ಇಂದಿಗೂ ಪ್ರಸ್ತುತ ಎಂದು ಪ್ರತಿಪಾದಿಸಿದರು.

ಬಸವಣ್ಣನವರ ನುಡಿಯಂತೆ ದೇಹವೇ ದೇಗುಲ, ಶಿರವೇ ಕಳಸ ಎಂಬುದನ್ನು ಪಾಲಿಸಬೇಕು, ಮಾನವೀಯತೆ ಗಿಂತ ದೊಡ್ಡದ್ದು ಯಾವುದು ಇಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದವರು ಬಸವಣ್ಣ. ಇವರ ವಚನಗಳು ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ ಜಗತ್ತಿನಾದ್ಯಂತ ವಿಸ್ತಾರವಾಗಿವೆ ಎಂದರು.

ಮಹಾ ಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು ಸಾಂಪ್ರದಾಯಿಕ ಕುಟುಂಬದಲ್ಲಿ ಜನಿಸಿ ಮದುವೆ ಆದ ನಂತರ ತನ್ನ ಸಂಸಾರದಲ್ಲಿ ಅಥವಾ ಸುತ್ತಮುತ್ತ ಪರಿಸರದಲ್ಲಿ ಕಂಡಂತಹ ತೊಡಕು ಮತ್ತು ಸಮಸ್ಯೆಗಳನ್ನು ಆಧ್ಯಾತ್ಮಿಕ ನೆಲಗಟ್ಟೆಯಲ್ಲೆ ಮನ ಪರಿವರ್ತನೆ ಮಾಡುತ್ತಿದ್ದರು, ಸ್ವತಃ ಆಕೆಯ ಕುಟುಂಬದಲ್ಲಿ ಇದ್ದಂತಹ ಮೈದುನನ ಮನ ಪರಿವರ್ತನೆ ಮಾಡಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಮ್ ಬಾಬು ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago