ಮಂಡ್ಯ

ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ, ಚಿಂತನೆ ಅಳವಡಿಸಿಕೊಳ್ಳಿ: ಡಾ.ಕುಮಾರ

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಬಸವಣ್ಣ ಮತ್ತು ಹೇಮರೆಡ್ಡಿ ಮಲ್ಲಮ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಜ್ಞಾನ ಭಂಡಾರ ವಿದ್ದಂತೆ. ಪ್ರತಿ ಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಬಸವಣ್ಣನವರ ವಚನಗಳನ್ನು ತಿಳಿಸಿ, ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದರು.

ಬಸವಣ್ಣನವರು 12 ಶತಮಾನದಲ್ಲಿ ತಲೆದೂರಿದ್ದ ಜಾತಿ ಪದ್ಧತಿಯನ್ನು ವಿರೋಧಿಸಿ, ಈ ಜಾತಿ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಟೊಂಕ ಕಟ್ಟಿ ನಿಂತಿದ್ದರು. ವಚನಗಳ ಮೂಲಕ ಪ್ರತಿಯೊಬ್ಬರಿಗೂ ವಿಚಾರ ವಿನಿಮಯ ಮಾಡಿ ಸಮಾಜದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಿಸಿ ಜ್ಞಾನ ಮತ್ತು ಅನ್ನ ದಾಸೋಹ ನಡೆಸುವುದರ ಜೊತೆಗೆ ಜನರಿಗೆ ಅರ್ಥವಾಗುವ ಸರಳವಾದ ವಚನಗಳ ಮೂಲಕ ಜೀವನದ ಸಂದೇಶಗಳನ್ನು ನೀಡಿದರು. ಅವರು ನೀಡಿರುವ ವಚನಗಳು ಇಂದಿಗೂ ಪ್ರಸ್ತುತ ಎಂದು ಪ್ರತಿಪಾದಿಸಿದರು.

ಬಸವಣ್ಣನವರ ನುಡಿಯಂತೆ ದೇಹವೇ ದೇಗುಲ, ಶಿರವೇ ಕಳಸ ಎಂಬುದನ್ನು ಪಾಲಿಸಬೇಕು, ಮಾನವೀಯತೆ ಗಿಂತ ದೊಡ್ಡದ್ದು ಯಾವುದು ಇಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದವರು ಬಸವಣ್ಣ. ಇವರ ವಚನಗಳು ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ ಜಗತ್ತಿನಾದ್ಯಂತ ವಿಸ್ತಾರವಾಗಿವೆ ಎಂದರು.

ಮಹಾ ಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು ಸಾಂಪ್ರದಾಯಿಕ ಕುಟುಂಬದಲ್ಲಿ ಜನಿಸಿ ಮದುವೆ ಆದ ನಂತರ ತನ್ನ ಸಂಸಾರದಲ್ಲಿ ಅಥವಾ ಸುತ್ತಮುತ್ತ ಪರಿಸರದಲ್ಲಿ ಕಂಡಂತಹ ತೊಡಕು ಮತ್ತು ಸಮಸ್ಯೆಗಳನ್ನು ಆಧ್ಯಾತ್ಮಿಕ ನೆಲಗಟ್ಟೆಯಲ್ಲೆ ಮನ ಪರಿವರ್ತನೆ ಮಾಡುತ್ತಿದ್ದರು, ಸ್ವತಃ ಆಕೆಯ ಕುಟುಂಬದಲ್ಲಿ ಇದ್ದಂತಹ ಮೈದುನನ ಮನ ಪರಿವರ್ತನೆ ಮಾಡಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಮ್ ಬಾಬು ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago