ಮಂಡ್ಯ

ಮಂಡ್ಯ | ಜಿಲ್ಲೆಗೆ ಆಗಮಿಸಿದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆ

ಮಂಡ್ಯ : ಬಸವ ಜಯಂತಿ ಅಂಗವಾಗಿ ರಾಜ್ಯಾದ್ಯಂತ 15 ಜಿಲ್ಲೆಗಳಲ್ಲಿ ಏಪ್ರಿಲ್ 17 ರಿಂದ 29 ರವರೆಗೆ ಸಂಚರಿಸುತ್ತಿರುವ “ಅನುಭವ ಮಂಟಪ – ಬಸವಾದಿ ಶರಣರ ವೈಭವ” ರಥಯಾತ್ರೆ ಶುಕ್ರವಾರ ಜಿಲ್ಲೆಗೆ ಆಗಮಿಸಿದೆ.

ಜಿಲ್ಲಾಧಿಕಾರಿ ಡಾ.ಕುಮಾರ ರಥಯಾತ್ರೆಯನ್ನು ಬರಮಾಡಿಕೊಂಡ ಜಿಲ್ಲೆಯ ಸಂಚಾರದ ಯಾತ್ರೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಬಸವಣ್ಣನವರು ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ ವಿಶ್ವಕ್ಕೆ ಮಾದರಿ. ಅವರು ಇಡೀ ಜಗತ್ತಿಗೆ ವಿಶ್ವ ಗುರು ಆದವರು. ಅವರ ತತ್ವ ಹಾಗೂ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಚಿಂತಕರಾಗಿ, ವಚನಕಾರರಾಗಿ 12 ನೇ ಶತಮಾನದಿಂದ ಇಲ್ಲಿಯವರೆಗೂ ಅವರು ಸಮಾಜಕ್ಕೆ ನೀಡಿರುವ ಬೋಧನೆಗಳು, ಚಿಂತನೆಗಳು, ಮೌಲ್ಯಗಳು ಹಾಗೂ ಆದರ್ಶಗಳು ನಿಜಕ್ಕೂ ಅಪಾರ ಅವರ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದರು.

ಸಾಮಾಜಿಕ ಸುಧಾರಣೆ ಮತ್ತು ಧಾರ್ಮಿಕ ಸುಧಾರಣೆಯಲ್ಲಿ ಮಹತ್ತರ ಬದಲಾವಣೆಯ ಆಶಯವನ್ನು ಕಂಡಂತಹ ಮಹಾನ್ ಮಾನವತವಾದಿ ಬಸವಣ್ಣರವರು. ಇಂದು ಅವರ ಜಯಂತಿ ಅಂಗವಾಗಿ ಸರ್ಕಾರ ಕೈಗೊಂಡಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆಗೆ ಚಾಲನೆ ನೀಡಿದ್ದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಇಂತಹ ಮಹಾನ್ ಚಿಂತಕರ ಆದರ್ಶಗಳನ್ನು ನಾಡಿನಾದ್ಯಂತ ಪಸರಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ಸರ್ಕಾರವು ಏಪ್ರಿಲ್ 29 ಹಾಗೂ 30 ರಂದು ಅನುಭವ ಮಂಟಪ ಬಸವಾದಿ ಶರಣರ ವೈಭವ ಎಂಬ ಪರಿಕಲ್ಪನೆಯಲ್ಲಿ ಎರಡು ದಿನದ ಕಾರ್ಯಕ್ರಮವನ್ನು ಸಹ ಕೂಡಲಸಂಗಮದಲ್ಲಿ ಆಯೋಜಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ರೆಡ್ ಕ್ರಾಸ್ ಸಭಾಧ್ಯಕ್ಷ ಡಾ. ಮೀರಾ ಶಿವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ಸಮುದಾಯ ಮುಖಂಡರುಗಳಾದ ಎಲ್.ಸಂದೇಶ್, ರಂಗಸ್ವಾಮಿ, ಎಂ. ವಿ ಧರಣೇಂದ್ರಯ್ಯ, ಮಂಜುನಾಥ ಬೆಟ್ಟಹಳ್ಳಿ, ರುದ್ರಸ್ವಾಮಿ, ಕೆಂಪಯ್ಯ ಸೇರಿದಂತೆ ಇನ್ನಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

4 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

4 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

5 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

6 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

6 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

6 hours ago